<p><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.</p>.<p>ಸದ್ಯ ವಿರೋಧ ಪಕ್ಷದ ನಾಯಕ ರಾಗಿರುವ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರ ರಾಜ್ಯಸಭಾ ಸದಸ್ಯತ್ವ ಫೆ. 15ರಂದು ಮುಕ್ತಾಯಗೊಳ್ಳುವುದು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಪಕ್ಷವನ್ನು ಮುನ್ನಡೆಸಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ತಿಳಿಸಿದೆ.</p>.<p>ವಿರೋಧ ಪಕ್ಷದ ನಾಯಕರನ್ನಾಗಿ ಖರ್ಗೆ ಅವರ ಆಯ್ಕೆ ಮಾಡಿರುವ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.</p>.<p>ಆಜಾದ್ ಅವರ ಅಧಿಕಾರಾವಧಿ ಮುಗಿದ ನಂತರ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜ್ಯಸಭೆಯಲ್ಲಿ ಉಪನಾಯಕರಾಗಿರುವ ಆನಂದ್ ಶರ್ಮಾ, ಹಿರಿಯ ಮುಖಂಡರಾದ ದಿಗ್ವಿಜಯ್ ಸಿಂಗ್ ಹಾಗೂ ಪಿ.ಚಿದಂಬರಂ ಅವರ ಹೆಸರುಗಳು ಕೇಳಿ ಬಂದಿದ್ದವು. ಈಗ ಖರ್ಗೆ ಅವರಿಗೆ ಈ ಪಟ್ಟ ಕಟ್ಟುವುದಾಗಿ ಪ್ರಕಟಿಸುವ ಮೂಲಕ ಕಾಂಗ್ರೆಸ್ ಈ ಕುರಿತ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.</p>.<p>ಗಾಂಧಿ ಕುಟುಂಬದ ನಿಷ್ಠರಾಗಿರುವ, 78 ವರ್ಷದ ಖರ್ಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನು ಪಡೆಯುತ್ತಿರುವ ರಾಜ್ಯದ ಎರಡನೇ ಮುಖಂಡರಾಗಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಖರ್ಗೆ ಅವರನ್ನು ಕಳೆದ ವರ್ಷ ಜೂನ್ನಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.</p>.<p>ಆಗಿನ ಜನತಾ ಪಾರ್ಟಿ ಸಂಸ್ಥಾಪಕರಲ್ಲೊಬ್ಬರಾದ, ಮೈಸೂರಿನ ಎಂ.ಎಸ್.ಗುರುಪಾದಸ್ವಾಮಿ ಅವರು ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.</p>.<p>1971ರ ಮಾರ್ಚ್ನಿಂದ 1972ರ ಏಪ್ರಿಲ್ ವರೆಗೆ, 1991ರ ಜೂನ್ನಿಂದ ಜುಲೈ ವರೆಗೆ ಗುರುಪಾದಸ್ವಾಮಿ ಅವರು ಈ ಹುದ್ದೆಯಲ್ಲಿದ್ದರು.</p>.<p>ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆಯನ್ನು 1969ರಲ್ಲಿ ಸೃಷ್ಟಿಸಲಾಯಿತು. ಕಾಂಗ್ರೆಸ್ (ಒ) ಪಕ್ಷದ ನಾಯಕ ಶ್ಯಾಮನಂದನ್ ಮಿಶ್ರಾ ಅವರು ವಿರೋಧ ಪಕ್ಷದ ಮೊದಲ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.</p>.<p><strong>ಇದನ್ನೂ ಓದಿ...</strong></p>.<p><strong><a href="https://www.prajavani.net/india-news/pm-modi-is-a-coward-who-cannot-stand-up-to-the-chinese-rahul-gandhi-scathing-attack-804562.html" target="_blank">ಚೀನಿಯರ ಮುಂದೆ ನಿಲ್ಲಲಾಗದ ಪ್ರಧಾನಮಂತ್ರಿ ಒಬ್ಬ ಹೇಡಿ: ರಾಹುಲ್ ಗಾಂಧಿ ವಾಗ್ದಾಳಿ</a></strong></p>.<p><strong><a href="https://www.prajavani.net/india-news/congress-mp-ghulam-nabi-azad-says-in-rajya-sabha-l-proud-to-be-a-hindustani-muslim-india-heaven-of-803711.html" target="_blank">ಭಾರತ ಭೂಲೋಕದ ಸ್ವರ್ಗ, ಭಾರತೀಯ ಮುಸ್ಲಿಮನಾಗಿರಲು ಹೆಮ್ಮೆಯಿದೆ: ಗುಲಾಂ ನಬಿ ಆಜಾದ್ </a></strong></p>.<p><strong><a href="https://www.prajavani.net/india-news/pm-narendra-modi-breaks-down-as-he-bids-farewell-to-retiring-mps-in-rajya-sabha-praised-ghulam-nabi-803699.html" itemprop="url" target="_blank">ರಾಜ್ಯಸಭೆ: ಗುಲಾಂ ನಬಿ ಆಜಾದ್ ಕುರಿತು ಮಾತನಾಡುವಾಗ ಗದ್ಗದಿತರಾದ ಪ್ರಧಾನಿ ಮೋದಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.</p>.<p>ಸದ್ಯ ವಿರೋಧ ಪಕ್ಷದ ನಾಯಕ ರಾಗಿರುವ ಹಿರಿಯ ಮುಖಂಡ ಗುಲಾಂ ನಬಿ ಆಜಾದ್ ಅವರ ರಾಜ್ಯಸಭಾ ಸದಸ್ಯತ್ವ ಫೆ. 15ರಂದು ಮುಕ್ತಾಯಗೊಳ್ಳುವುದು. ಈ ಹಿನ್ನೆಲೆಯಲ್ಲಿ ರಾಜ್ಯಸಭೆಯಲ್ಲಿ ಪಕ್ಷವನ್ನು ಮುನ್ನಡೆಸಲು ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿರುವುದಾಗಿ ಕಾಂಗ್ರೆಸ್ ಹೈಕಮಾಂಡ್ ಶುಕ್ರವಾರ ತಿಳಿಸಿದೆ.</p>.<p>ವಿರೋಧ ಪಕ್ಷದ ನಾಯಕರನ್ನಾಗಿ ಖರ್ಗೆ ಅವರ ಆಯ್ಕೆ ಮಾಡಿರುವ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸಭಾಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದಿದ್ದಾರೆ.</p>.<p>ಆಜಾದ್ ಅವರ ಅಧಿಕಾರಾವಧಿ ಮುಗಿದ ನಂತರ, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ರಾಜ್ಯಸಭೆಯಲ್ಲಿ ಉಪನಾಯಕರಾಗಿರುವ ಆನಂದ್ ಶರ್ಮಾ, ಹಿರಿಯ ಮುಖಂಡರಾದ ದಿಗ್ವಿಜಯ್ ಸಿಂಗ್ ಹಾಗೂ ಪಿ.ಚಿದಂಬರಂ ಅವರ ಹೆಸರುಗಳು ಕೇಳಿ ಬಂದಿದ್ದವು. ಈಗ ಖರ್ಗೆ ಅವರಿಗೆ ಈ ಪಟ್ಟ ಕಟ್ಟುವುದಾಗಿ ಪ್ರಕಟಿಸುವ ಮೂಲಕ ಕಾಂಗ್ರೆಸ್ ಈ ಕುರಿತ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದೆ.</p>.<p>ಗಾಂಧಿ ಕುಟುಂಬದ ನಿಷ್ಠರಾಗಿರುವ, 78 ವರ್ಷದ ಖರ್ಗೆ, ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ಸ್ಥಾನವನ್ನು ಪಡೆಯುತ್ತಿರುವ ರಾಜ್ಯದ ಎರಡನೇ ಮುಖಂಡರಾಗಿದ್ದಾರೆ. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡ ಖರ್ಗೆ ಅವರನ್ನು ಕಳೆದ ವರ್ಷ ಜೂನ್ನಲ್ಲಿ ನಡೆದ ಚುನಾವಣೆಯಲ್ಲಿ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.</p>.<p>ಆಗಿನ ಜನತಾ ಪಾರ್ಟಿ ಸಂಸ್ಥಾಪಕರಲ್ಲೊಬ್ಬರಾದ, ಮೈಸೂರಿನ ಎಂ.ಎಸ್.ಗುರುಪಾದಸ್ವಾಮಿ ಅವರು ಎರಡು ಬಾರಿ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.</p>.<p>1971ರ ಮಾರ್ಚ್ನಿಂದ 1972ರ ಏಪ್ರಿಲ್ ವರೆಗೆ, 1991ರ ಜೂನ್ನಿಂದ ಜುಲೈ ವರೆಗೆ ಗುರುಪಾದಸ್ವಾಮಿ ಅವರು ಈ ಹುದ್ದೆಯಲ್ಲಿದ್ದರು.</p>.<p>ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆಯನ್ನು 1969ರಲ್ಲಿ ಸೃಷ್ಟಿಸಲಾಯಿತು. ಕಾಂಗ್ರೆಸ್ (ಒ) ಪಕ್ಷದ ನಾಯಕ ಶ್ಯಾಮನಂದನ್ ಮಿಶ್ರಾ ಅವರು ವಿರೋಧ ಪಕ್ಷದ ಮೊದಲ ನಾಯಕರಾಗಿ ಕಾರ್ಯ ನಿರ್ವಹಿಸಿದ್ದರು.</p>.<p><strong>ಇದನ್ನೂ ಓದಿ...</strong></p>.<p><strong><a href="https://www.prajavani.net/india-news/pm-modi-is-a-coward-who-cannot-stand-up-to-the-chinese-rahul-gandhi-scathing-attack-804562.html" target="_blank">ಚೀನಿಯರ ಮುಂದೆ ನಿಲ್ಲಲಾಗದ ಪ್ರಧಾನಮಂತ್ರಿ ಒಬ್ಬ ಹೇಡಿ: ರಾಹುಲ್ ಗಾಂಧಿ ವಾಗ್ದಾಳಿ</a></strong></p>.<p><strong><a href="https://www.prajavani.net/india-news/congress-mp-ghulam-nabi-azad-says-in-rajya-sabha-l-proud-to-be-a-hindustani-muslim-india-heaven-of-803711.html" target="_blank">ಭಾರತ ಭೂಲೋಕದ ಸ್ವರ್ಗ, ಭಾರತೀಯ ಮುಸ್ಲಿಮನಾಗಿರಲು ಹೆಮ್ಮೆಯಿದೆ: ಗುಲಾಂ ನಬಿ ಆಜಾದ್ </a></strong></p>.<p><strong><a href="https://www.prajavani.net/india-news/pm-narendra-modi-breaks-down-as-he-bids-farewell-to-retiring-mps-in-rajya-sabha-praised-ghulam-nabi-803699.html" itemprop="url" target="_blank">ರಾಜ್ಯಸಭೆ: ಗುಲಾಂ ನಬಿ ಆಜಾದ್ ಕುರಿತು ಮಾತನಾಡುವಾಗ ಗದ್ಗದಿತರಾದ ಪ್ರಧಾನಿ ಮೋದಿ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>