ಬಿಜೆಪಿಯು ಪಕ್ಷಾಂತರಕ್ಕೆ ಪ್ರಚೋದನೆ ನೀಡುತ್ತಿದೆ. ಗೋವಾ, ಮಣಿಪುರ, ಕರ್ನಾಟಕ ಮತ್ತು ಮಧ್ಯ ಪ್ರದೇಶದಲ್ಲಿ ಶಾಸಕರನ್ನು ಖರೀದಿಸುವ ಮೂಲಕ ಸರ್ಕಾರಗಳನ್ನು ಉರುಳಿಸಿದೆ. ತಮಿಳುನಾಡಿನ ಶಾಸಕರು ವಿದ್ಯಾವಂತರು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದವರು. ಅವರನ್ನು ಖರೀದಿಸಲಾಗದು ಎಂದು ಖರ್ಗೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ ಹೇಳಿದ್ದಾರೆ.