ಉಪಚುನಾವಣೆಯು ಟಿಎಂಸಿ ಪಕ್ಷಕ್ಕೆ ಈಗ ಅನಿವಾರ್ಯವಾಗಿದೆ. ಏಕೆಂದರೆ ಪಕ್ಷದ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದರು. ಆದರೂ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಅವರು, ಆರು ತಿಂಗಳ ಒಳಗೆ ವಿಧಾನಸಭೆಗೆ ಆಯ್ಕೆಯಾಗಬೇಕಿದೆ. ಸಂವಿಧಾನದ ಪ್ರಕಾರ, ಆರು ತಿಂಗಳ ಒಳಗೆ ಆಯ್ಕೆಯಾಗದಿದ್ದರೆ, ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ.