<p><strong>ನವದೆಹಲಿ:</strong> ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ 2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವು ಭಾರತದ ಒಕ್ಕೂಟ ವ್ಯವಸ್ಥೆ ಮೇಲೆಮಾಡಿರುವ 'ಸರ್ಜಿಕಲ್ ಸ್ಟೈಕ್' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಅಲ್ಲದೆ ಕೇಂದ್ರ ಸರ್ಕಾರದ ಜಿಎನ್ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.</p>.<p>ಈ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಮಮತಾ, ಕೇಂದ್ರ ಸರ್ಕಾರದ ಈ ಕ್ರಮವು ಭಾರತದ ಒಕ್ಕೂಟ ವ್ಯವಸ್ಥೆಮೇಲೆಮಾಡಿರುವ ಸರ್ಜಿಕಲ್ ಸ್ಟೈಕ್ ಆಗಿದೆ ಎಂದು ಆರೋಪಿಸಿದರು.</p>.<p>ಕೇಂದ್ರ ಬಿಜೆಪಿ ಸರ್ಕಾರವು 2021 ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವನ್ನು ಮಾರ್ಚ್ 15ರಂದು ಮಂಡಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-leaders-lure-voters-with-bagful-of-cash-during-polls-they-are-absent-during-crisis-west-bengal-814370.html" itemprop="url">ದುಡ್ಡಿನ ಚೀಲಗಳನ್ನು ಹೊತ್ತ ವಿಮಾನಗಳು ಪಶ್ಚಿಮ ಬಂಗಾಳಕ್ಕೆ ಬರುತ್ತಿವೆ: ಮಮತಾ </a></p>.<p>ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಪಿಪಿ) ಪಕ್ಷದಿಂದ ಹೀನಾಯ ಹಾಗೂ ಅವಮಾನಕರ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಮೂಲಕ ದೆಹಲಿಯನ್ನು ಆಳಲು ಮುಂದಾಗಿದೆ. ಇದುವೇ ಜಿಎನ್ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ನೈಜ ಉದ್ದೇಶ ಎಂದು ಉಲ್ಲೇಖಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿ ಪತ್ರಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿರುವ ಕೇಜ್ರಿವಾಲ್, ದೆಹಲಿಯ ಜನತೆಗೆ ದೃಢವಾದ ಬೆಂಬಲ ನೀಡಿರುವುದಕ್ಕೆ ದೀದಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.</p>.<p>2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ಗೆ ಹೆಚ್ಚುವರಿ ಅಧಿಕಾರವನ್ನು ನೀಡಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಇದರಂತೆ ದೆಹಲಿ ಸರ್ಕಾರ ಯಾವುದೇ ಕಾಯ್ದೆ ರಚಿಸುವ ಮುನ್ನ ಲೆಫ್ಟಿನೆಂಟ್ ಗರ್ವನರ್ ಅಭಿಪ್ರಾಯ ಸಂಗ್ರಹಿಸುವುದು ಅನಿವಾರ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿರುವ 2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವು ಭಾರತದ ಒಕ್ಕೂಟ ವ್ಯವಸ್ಥೆ ಮೇಲೆಮಾಡಿರುವ 'ಸರ್ಜಿಕಲ್ ಸ್ಟೈಕ್' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.</p>.<p>ಅಲ್ಲದೆ ಕೇಂದ್ರ ಸರ್ಕಾರದ ಜಿಎನ್ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ವಿರುದ್ಧ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.</p>.<p>ಈ ಕುರಿತು ದೆಹಲಿ ಮುಖ್ಯಮಂತ್ರಿಗೆ ಪತ್ರ ಬರೆದಿರುವ ಮಮತಾ, ಕೇಂದ್ರ ಸರ್ಕಾರದ ಈ ಕ್ರಮವು ಭಾರತದ ಒಕ್ಕೂಟ ವ್ಯವಸ್ಥೆಮೇಲೆಮಾಡಿರುವ ಸರ್ಜಿಕಲ್ ಸ್ಟೈಕ್ ಆಗಿದೆ ಎಂದು ಆರೋಪಿಸಿದರು.</p>.<p>ಕೇಂದ್ರ ಬಿಜೆಪಿ ಸರ್ಕಾರವು 2021 ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕವನ್ನು ಮಾರ್ಚ್ 15ರಂದು ಮಂಡಿಸಿತ್ತು.</p>.<p>ಇದನ್ನೂ ಓದಿ:<a href="https://www.prajavani.net/india-news/bjp-leaders-lure-voters-with-bagful-of-cash-during-polls-they-are-absent-during-crisis-west-bengal-814370.html" itemprop="url">ದುಡ್ಡಿನ ಚೀಲಗಳನ್ನು ಹೊತ್ತ ವಿಮಾನಗಳು ಪಶ್ಚಿಮ ಬಂಗಾಳಕ್ಕೆ ಬರುತ್ತಿವೆ: ಮಮತಾ </a></p>.<p>ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಪಿಪಿ) ಪಕ್ಷದಿಂದ ಹೀನಾಯ ಹಾಗೂ ಅವಮಾನಕರ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾಗೆ ಸಾಧ್ಯವಾಗುತ್ತಿಲ್ಲ. ಹಾಗಾಗಿ ಈ ಮೂಲಕ ದೆಹಲಿಯನ್ನು ಆಳಲು ಮುಂದಾಗಿದೆ. ಇದುವೇ ಜಿಎನ್ಸಿಟಿಡಿ ಕಾಯ್ದೆಯ ಪ್ರಸ್ತಾವಿತ ತಿದ್ದುಪಡಿಗಳ ನೈಜ ಉದ್ದೇಶ ಎಂದು ಉಲ್ಲೇಖಿಸಿದ್ದಾರೆ.</p>.<p>ಮಮತಾ ಬ್ಯಾನರ್ಜಿ ಪತ್ರಕ್ಕೆ ಟ್ವೀಟ್ ಮೂಲಕ ಉತ್ತರ ನೀಡಿರುವ ಕೇಜ್ರಿವಾಲ್, ದೆಹಲಿಯ ಜನತೆಗೆ ದೃಢವಾದ ಬೆಂಬಲ ನೀಡಿರುವುದಕ್ಕೆ ದೀದಿ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.</p>.<p>2021ರ ದೆಹಲಿ ಸರಕಾರ ರಾಷ್ಟ್ರೀಯ ರಾಜಧಾನಿ ವಲಯ (ತಿದ್ದುಪಡಿ) ವಿಧೇಯಕದಲ್ಲಿ ದೆಹಲಿ ಲೆಫ್ಟಿನೆಂಟ್ ಗವರ್ನರ್ಗೆ ಹೆಚ್ಚುವರಿ ಅಧಿಕಾರವನ್ನು ನೀಡಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಇದರಂತೆ ದೆಹಲಿ ಸರ್ಕಾರ ಯಾವುದೇ ಕಾಯ್ದೆ ರಚಿಸುವ ಮುನ್ನ ಲೆಫ್ಟಿನೆಂಟ್ ಗರ್ವನರ್ ಅಭಿಪ್ರಾಯ ಸಂಗ್ರಹಿಸುವುದು ಅನಿವಾರ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>