ಆದರೆ, ಬಳಿಕ ಪ್ರಧಾನಿಯವರು ನಡೆಸಿದ ಸಭೆಗೆ ಮಮತಾ ಹಾಜರಾಗಿರಲಿಲ್ಲ. ಪಶ್ಚಿಮ ಬಂಗಾಳ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೂಡ ಪ್ರಧಾನಿ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ಜಟಾಪಟಿಗೆ ಕಾರಣವಾಗಿತ್ತು. ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಆಲಾಪನ್ ಬಂದೋಪಾಧ್ಯಾಯ ಅವರನ್ನು ಕೇಂದ್ರ ಸರ್ಕಾರವು, ಕೇಂದ್ರ ಸೇವೆಗೆ ನೇಮಿಸಿ ಆದೇಶಿಸಿತ್ತು. ಆದರೆ, ಬಂದೋಪಾಧ್ಯಾಯ ಅವರನ್ನು ಕೇಂದ್ರದ ಸೇವೆಗೆ ಕಳುಹಿಸಿಕೊಡಲಾಗದು ಎಂದು ಮಮತಾ ಬ್ಯಾನರ್ಜಿ ಪ್ರಧಾನಿಗೆ ಪತ್ರ ಬರೆದಿದ್ದರು. ಬಳಿಕ ಸರ್ಕಾರಿ ಸೇವೆಗೆ ಬಂದೋಪಾಧ್ಯಾಯ ರಾಜೀನಾಮೆ ನೀಡಿದ್ದು, ಅವರನ್ನು ಸಲಹೆಗಾರನನ್ನಾಗಿ ಮಮತಾ ನೇಮಕ ಮಾಡಿಕೊಂಡಿದ್ದರು.