ಇಲ್ಲಿ ರಾಜ್ಯ ಸರ್ಕಾರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ‘ಭ್ರಷ್ಟಾಚಾರಕ್ಕೆ ನಾನು ಬೆಂಬಲ ನೀಡುವುದಿಲ್ಲ. ಆದರೆ, ನನ್ನ ಮೇಲೆ ದುರುದ್ದೇಶಪೂರಿತ ಅಪಪ್ರಚಾರ ನಡೆಸಲಾಗುತ್ತಿದೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಒಡೆಯಬಹುದೆಂದು ಬಿಜೆಪಿ ಭಾವಿಸಿದ್ದರೆ ಅದು ತಪ್ಪು ಮತ್ತು ಅಸಾಧ್ಯ’ ಎಂದುವಿರೋಧ ಪಕ್ಷದ ಮೇಲೆ ಕಿಡಿಕಾರಿದರು.