<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.</p>.<p>ನಗರದ ಕೇಂದ್ರ ಭಾಗದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಬುಧವಾರ ಮಧ್ಯಾಹ್ನದಿಂದ ಮಮತಾ ಹಾಗೂ ಟಿಎಂಸಿ(ತೃಣಮೂಲ ಕಾಂಗ್ರೆಸ್) ಪಕ್ಷದ ನಾಯಕರು ಧರಣಿ ಆರಂಭಿಸಿದ್ದು, ತಾರತಮ್ಯ ಧೋರಣೆಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕರೆಕೊಟ್ಟಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಲಪಂಥೀಯ ಪಕ್ಷಗಳಿಂದ ಟಿಎಂಸಿಯು ಅಂತರ ಕಾಪಾಡಿಕೊಳ್ಳುವ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದೂ ತಿಳಿಸಿದ್ದಾರೆ. </p>.<p>ಗುರುವಾರ ಸಂಜೆ ಈ ಅಹೋರಾತ್ರಿ ಧರಣಿ ಮುಕ್ತಾಯಗೊಳ್ಳಲಿರುವ ಮೂಲಕ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಬಿಸಿ ಏರಲಾರಂಭಿಸಿದೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆಗಳನ್ನೂ ಕೈಗೊಂಡಿದ್ದಾರೆ. ಈ ಮೂಲಕ ಬಂಗಾಳದಲ್ಲಿ ರ್ಯಾಲಿ ಮೇಲಾಟಗಳು ಶುರುವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ: </strong>ಪಶ್ಚಿಮ ಬಂಗಾಳದ ವಿವಿಧ ಯೋಜನೆಗಳಿಗೆ ಕೇಂದ್ರ ಸರ್ಕಾರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಎರಡು ದಿನಗಳ ಕಾಲ ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.</p>.<p>ನಗರದ ಕೇಂದ್ರ ಭಾಗದಲ್ಲಿರುವ ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಎದುರು ಬುಧವಾರ ಮಧ್ಯಾಹ್ನದಿಂದ ಮಮತಾ ಹಾಗೂ ಟಿಎಂಸಿ(ತೃಣಮೂಲ ಕಾಂಗ್ರೆಸ್) ಪಕ್ಷದ ನಾಯಕರು ಧರಣಿ ಆರಂಭಿಸಿದ್ದು, ತಾರತಮ್ಯ ಧೋರಣೆಯ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂದು ಕರೆಕೊಟ್ಟಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮತ್ತು ಬಲಪಂಥೀಯ ಪಕ್ಷಗಳಿಂದ ಟಿಎಂಸಿಯು ಅಂತರ ಕಾಪಾಡಿಕೊಳ್ಳುವ ನಿಲುವಿನಲ್ಲಿ ಬದಲಾವಣೆಯಿಲ್ಲ ಎಂದೂ ತಿಳಿಸಿದ್ದಾರೆ. </p>.<p>ಗುರುವಾರ ಸಂಜೆ ಈ ಅಹೋರಾತ್ರಿ ಧರಣಿ ಮುಕ್ತಾಯಗೊಳ್ಳಲಿರುವ ಮೂಲಕ ಬಂಗಾಳದಲ್ಲಿ ಮುಂಬರುವ ಲೋಕಸಭಾ ಚುನಾವಣೆಯ ಬಿಸಿ ಏರಲಾರಂಭಿಸಿದೆ.</p>.<p>ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಸುವೇಂದು ಅಧಿಕಾರಿ ರಾಜ್ಯ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆಗಳನ್ನೂ ಕೈಗೊಂಡಿದ್ದಾರೆ. ಈ ಮೂಲಕ ಬಂಗಾಳದಲ್ಲಿ ರ್ಯಾಲಿ ಮೇಲಾಟಗಳು ಶುರುವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>