ಕೋಲ್ಕತ್ತ: ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ದ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವರ್ಚುವಲ್ ಸಭೆ ಏರ್ಪಡಿಸಿದ್ದರು.
ಆದರೆ, ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಅವಮಾನ ಆಗಿದೆ ಎಂದು ಆ ರಾಜ್ಯದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಮಮತಾ ಅವರುಸಭೆಯಲ್ಲಿ ಎರಡು ಗಂಟೆ ಭಾಗಿಯಾದರೂ ಅವರಿಗೆ ಪ್ರಧಾನಿಯವರು ಮಾತನಾಡಲು ಅವಕಾಶ ನೀಡಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.
ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಅವರಿಗೆ ಮಾತನಾಡಲು ಅವಕಾಶ ನೀಡಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ಕೂಡ ಬ್ಯಾನರ್ಜಿ ಅವರು ಇಂತಹದೇ ಪ್ರಸಂಗ ಎದುರಿಸಿದ್ದರು.