ಗುರುವಾರ ನಂದಿಗ್ರಾಮದ ಬೋಯಲ್ ಮತಗಟ್ಟೆ ಸಂಖ್ಯೆ 7ರ ಸಮೀಪ ಗಾಲಿಕುರ್ಚಿಯಲ್ಲೇ ಕುಳಿತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ನಾವು ಬೆಳಿಗ್ಗೆಯಿಂದ 63 ದೂರುಗಳನ್ನು ದಾಖಲಿಸಿದ್ದೇವೆ. ಆದರೆ ಆಯೋಗ ಇಲ್ಲಿವರೆಗೂ ಯಾವುದೇ ದೂರಿನ ಬಗ್ಗೆಯೂ ಕ್ರಮ ಕೈಗೊಂಡಿಲ್ಲ. ಇದು ಸರಿಯಾದ ಕ್ರಮವಲ್ಲ. ಈಗ ನಾವು ನ್ಯಾಯಾಲಯದ ಮೊರೆ ಹೋಗುತ್ತವೆ‘ ಎಂದರು.