ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೂರುಗಳಿಗೆ ಸ್ಪಂದಿಸದ ಚುನಾವಣಾ ಆಯೋಗ: ಮಮತಾ ಬ್ಯಾನರ್ಜಿ ವಾಗ್ದಾಳಿ

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ
Last Updated 1 ಏಪ್ರಿಲ್ 2021, 10:27 IST
ಅಕ್ಷರ ಗಾತ್ರ

ನಂದಿಗ್ರಾಮ: ‘ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಸಂಬಂಧಿಸಿದ ಅನೇಕ ದೂರುಗಳನ್ನು ಸಲ್ಲಿಸಿದ್ದರೂ, ಚುನಾವಣಾ ಆಯೋಗ ಈವರೆಗೆ ಯಾವ ದೂರಿನ ಬಗ್ಗೆಯೂ ಕ್ರಮ ಕೈಗೊಂಡಿಲ್ಲ. ಗೃಹಸಚಿವ ಅಮಿತ್‌ ಶಾ ಸೂಚನೆಯ ಮೇರೆಗೆ ಈ ಆಯೋಗ ಕಾರ್ಯನಿರ್ವಹಿಸುತ್ತಿದೆ‘ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದರು.

ಗುರು‌ವಾರ ನಂದಿಗ್ರಾಮದ ಬೋಯಲ್‌ ಮತಗಟ್ಟೆ ಸಂಖ್ಯೆ 7ರ ಸಮೀಪ ಗಾಲಿಕುರ್ಚಿಯಲ್ಲೇ ಕುಳಿತು ಕೇಂದ್ರ ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ನಾವು ಬೆಳಿಗ್ಗೆಯಿಂದ 63 ದೂರುಗಳನ್ನು ದಾಖಲಿಸಿದ್ದೇವೆ. ಆದರೆ ಆಯೋಗ ಇಲ್ಲಿವರೆಗೂ ಯಾವುದೇ ದೂರಿನ ಬಗ್ಗೆಯೂ ಕ್ರಮ ಕೈಗೊಂಡಿಲ್ಲ. ಇದು ಸರಿಯಾದ ಕ್ರಮವಲ್ಲ. ಈಗ ನಾವು ನ್ಯಾಯಾಲಯದ ಮೊರೆ ಹೋಗುತ್ತವೆ‘ ಎಂದರು.

‘ಮತದಾರರನ್ನು ಬೆದರಿಸಲು ನಮ್ಮ ಪ್ರತಿಸ್ಪರ್ಧಿಗಳು ಬೇರೆ ರಾಜ್ಯಗಳಿಂದ ಗೂಂಡಾಗಳನ್ನು ಕರೆತಂದಿದ್ದಾರೆ‘ ಎಂದು ಮಮತಾ ಆರೋಪಿಸಿದರು.

ಮತ್ತೊಂದೆಡೆ, ಮಮತಾ ಬ್ಯಾನರ್ಜಿ ಭೇಟಿ ನೀಡಿದ ಮೇಲೆ ಬಿಜೆಪಿ ಬೆಂಬಲಿಗರು ಸಹ ಅದೇ ಮತಗಟ್ಟೆಗೆ ಸಮೀಪಕ್ಕೆ ಬಂದು ‘ಜೈ ಶ್ರೀರಾಮ್‘ ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ನಿಯಂತ್ರಿಸಲು ಸ್ಥಳಕ್ಕೆ ಹೆಚ್ಚುವರಿ ಪೊಲೀಸರನ್ನು ಕರೆಸಬೇಕಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT