<p class="title"><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಇಲ್ಲಿನ ಕಾಳಿಘಾಟ್ ಪ್ರದೇಶದಲ್ಲಿ ಸ್ಥಳೀಯ ಪಾಲಿಕೆ ಕೇಂದ್ರದ ಬಳಿ ಸಾಲಿನಲ್ಲಿ ನಿಂತು ‘ಸ್ವಸ್ಥ್ಯ ಸಾಥಿ’ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆದರು.</p>.<p class="title">ಮುಖ್ಯಮಂತ್ರಿ ಅವರ ಈ ನಡೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು, ‘ಇದೊಂದು ಶುದ್ಧ ನಾಟಕ’ ಎಂದು ಟೀಕಿಸಿದ್ದಾರೆ.</p>.<p class="title">ಟಿಎಂಸಿ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ, ನಗರಾಭಿವೃದ್ಧಿ ಖಾತೆ ಸಚಿವ ಫಿರ್ರಾದ್ ಹಕೀಂ ಮತ್ತು ಇತರೆ ಸರ್ಕಾರಿ ಅಧಿಕಾರಿಗಳ ಜೊತೆಗೂಡಿ ಕೇಂದ್ರದಜೈಹಿಂದ್ ಭವನಕ್ಕೆ ಬೆಳಿಗ್ಗೆ 11.45ಕ್ಕೆ ಬಂದು ಕಾರ್ಡ್ ಸ್ವೀಕರಿಸಿದರು.</p>.<p class="title">ಸ್ವಸ್ಥ್ಯ ಸಾಥಿ ಎಂಬುದು ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮುಂಚೂಣಿ ಕಾರ್ಯಕ್ರಮವಾಗಿದ್ದು, ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ₹ 5 ಲಕ್ಷದವರೆಗಿನ ವೆಚ್ಚದ ವೈದ್ಯಕೀಯ ಸೌಲಭ್ಯದ ಭರವಸೆ ನೀಡಲಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಹಕೀಂ ಅವರು, ಮುಖ್ಯಮಂತ್ರಿ ಸಾಮಾನ್ಯರಂತೆ ಸಾಲಿನಲ್ಲಿ ನಿಂತು ಕಾರ್ಡ್ ಸ್ವೀಕರಿಸಿದರು. ಅವರೂ ಕೂಡಾ ಇತರ ನಾಗರಿಕರಂತೆ ಒಬ್ಬರು ಎಂಬುದನ್ನು ಇದು ಬಿಂಬಿಸುತ್ತದೆ ಎಂದರು.</p>.<p>ಮುಖ್ಯಮಂತ್ರಿ ಅವರು ಭಾನುವಾರ, ಎಲ್ಲ ಸಚಿವರು ಯೋಜನೆಯ ಕಾರ್ಡ್ ಪಡೆಯಬೇಕು ಎಂದು ಸಲಹೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಂಗಳವಾರ ಇಲ್ಲಿನ ಕಾಳಿಘಾಟ್ ಪ್ರದೇಶದಲ್ಲಿ ಸ್ಥಳೀಯ ಪಾಲಿಕೆ ಕೇಂದ್ರದ ಬಳಿ ಸಾಲಿನಲ್ಲಿ ನಿಂತು ‘ಸ್ವಸ್ಥ್ಯ ಸಾಥಿ’ ಯೋಜನೆಯ ಸ್ಮಾರ್ಟ್ ಕಾರ್ಡ್ ಪಡೆದರು.</p>.<p class="title">ಮುಖ್ಯಮಂತ್ರಿ ಅವರ ಈ ನಡೆಯನ್ನು ರಾಜ್ಯ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರು, ‘ಇದೊಂದು ಶುದ್ಧ ನಾಟಕ’ ಎಂದು ಟೀಕಿಸಿದ್ದಾರೆ.</p>.<p class="title">ಟಿಎಂಸಿ ಮುಖ್ಯಸ್ಥರೂ ಆಗಿರುವ ಮುಖ್ಯಮಂತ್ರಿ, ನಗರಾಭಿವೃದ್ಧಿ ಖಾತೆ ಸಚಿವ ಫಿರ್ರಾದ್ ಹಕೀಂ ಮತ್ತು ಇತರೆ ಸರ್ಕಾರಿ ಅಧಿಕಾರಿಗಳ ಜೊತೆಗೂಡಿ ಕೇಂದ್ರದಜೈಹಿಂದ್ ಭವನಕ್ಕೆ ಬೆಳಿಗ್ಗೆ 11.45ಕ್ಕೆ ಬಂದು ಕಾರ್ಡ್ ಸ್ವೀಕರಿಸಿದರು.</p>.<p class="title">ಸ್ವಸ್ಥ್ಯ ಸಾಥಿ ಎಂಬುದು ಟಿಎಂಸಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರದ ಮುಂಚೂಣಿ ಕಾರ್ಯಕ್ರಮವಾಗಿದ್ದು, ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ₹ 5 ಲಕ್ಷದವರೆಗಿನ ವೆಚ್ಚದ ವೈದ್ಯಕೀಯ ಸೌಲಭ್ಯದ ಭರವಸೆ ನೀಡಲಿದೆ.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಹಕೀಂ ಅವರು, ಮುಖ್ಯಮಂತ್ರಿ ಸಾಮಾನ್ಯರಂತೆ ಸಾಲಿನಲ್ಲಿ ನಿಂತು ಕಾರ್ಡ್ ಸ್ವೀಕರಿಸಿದರು. ಅವರೂ ಕೂಡಾ ಇತರ ನಾಗರಿಕರಂತೆ ಒಬ್ಬರು ಎಂಬುದನ್ನು ಇದು ಬಿಂಬಿಸುತ್ತದೆ ಎಂದರು.</p>.<p>ಮುಖ್ಯಮಂತ್ರಿ ಅವರು ಭಾನುವಾರ, ಎಲ್ಲ ಸಚಿವರು ಯೋಜನೆಯ ಕಾರ್ಡ್ ಪಡೆಯಬೇಕು ಎಂದು ಸಲಹೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>