<p class="title"><strong>ಲಖನೌ:</strong> ಮತಾಂತರ ಮತ್ತು ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಸೂಫಿಯಾನ್ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನಕ್ಕೂ ಮುನ್ನ ನಡೆದ ಎನ್ಕೌಂಟರ್ನಲ್ಲಿ ಆತನ ಕಾಲಿಗೆ ಗುಂಡೇಟು ತಗುಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p class="title">ಪಕ್ಕದ ಮನೆಯ ಯುವತಿಗೆ ಬಲವಂತವಾಗಿ ಮದುವೆ ಹಾಗೂ ಮತಾಂತರವಾಗಲು ಸೂಫಿಯಾನ್ ಒತ್ತಾಯಿಸಿದ್ದು, ಯುವತಿ ನಿರಾಕರಿಸಿದಾಗ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿತ್ತು.</p>.<p class="title">ಲಖನೌನ ದುಬಗ್ಗಾ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಎನ್ಕೌಂಟರ್ನಲ್ಲಿ ಆತನ ಬಲ ಪಾದಕ್ಕೆ ಗುಂಡೇಟು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ದುಬಗ್ಗಾ ಪೊಲೀಸ್ ಠಾಣಾಧಿಕಾರಿ ಸುಖ್ವೀರ್ ಸಿಂಗ್ ಭದೌರಿಯಾ ತಿಳಿಸಿದ್ದಾರೆ.</p>.<p class="title">ಆರೋಪಿ ಸೂಫಿಯಾಸ್ ಬಂಧನಕ್ಕೆ ಸುಳಿವು ನೀಡಿದವರಿಗೆ ₹25,000 ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.</p>.<p class="title">ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ ಮತಾಂತರ ನಿಷೇಧ ಕಾಯ್ದೆ ಅಡಿ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಲಖನೌ:</strong> ಮತಾಂತರ ಮತ್ತು ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಸೂಫಿಯಾನ್ನನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧನಕ್ಕೂ ಮುನ್ನ ನಡೆದ ಎನ್ಕೌಂಟರ್ನಲ್ಲಿ ಆತನ ಕಾಲಿಗೆ ಗುಂಡೇಟು ತಗುಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.</p>.<p class="title">ಪಕ್ಕದ ಮನೆಯ ಯುವತಿಗೆ ಬಲವಂತವಾಗಿ ಮದುವೆ ಹಾಗೂ ಮತಾಂತರವಾಗಲು ಸೂಫಿಯಾನ್ ಒತ್ತಾಯಿಸಿದ್ದು, ಯುವತಿ ನಿರಾಕರಿಸಿದಾಗ ನಾಲ್ಕನೇ ಮಹಡಿಯಿಂದ ತಳ್ಳಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿತ್ತು.</p>.<p class="title">ಲಖನೌನ ದುಬಗ್ಗಾ ಪ್ರದೇಶದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಎನ್ಕೌಂಟರ್ನಲ್ಲಿ ಆತನ ಬಲ ಪಾದಕ್ಕೆ ಗುಂಡೇಟು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ದುಬಗ್ಗಾ ಪೊಲೀಸ್ ಠಾಣಾಧಿಕಾರಿ ಸುಖ್ವೀರ್ ಸಿಂಗ್ ಭದೌರಿಯಾ ತಿಳಿಸಿದ್ದಾರೆ.</p>.<p class="title">ಆರೋಪಿ ಸೂಫಿಯಾಸ್ ಬಂಧನಕ್ಕೆ ಸುಳಿವು ನೀಡಿದವರಿಗೆ ₹25,000 ಬಹುಮಾನ ನೀಡುವುದಾಗಿ ಘೋಷಿಸಲಾಗಿತ್ತು.</p>.<p class="title">ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಲ್ಲದೆ ಮತಾಂತರ ನಿಷೇಧ ಕಾಯ್ದೆ ಅಡಿ ದೂರು ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>