ಸುರ್ವೇಶ್ ಕುಮಾರ್ ದಿವಾಕರ್(45) ಎಂಬ ದಲಿತ ವ್ಯಕ್ತಿಯ ಮೇಲೆ ಐದುಮಂದಿಯ ಗುಂಪೊಂದು ಭಾನುವಾರ ದಾಳಿ ನಡೆಸಿದ್ದು, ಆತನನ್ನು ದೊಣ್ಣೆ ಮತ್ತು ಕಬ್ಬಿಣದ ಸರಳಿನಿಂದ ಮನಬಂದಂತೆ ಥಳಿಸಿತು. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಅವರು ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಈ ಪ್ರಕರಣ ಸಂಬಂಧ ನಾಲ್ಕು ಆರೋಪಿಗಳನ್ನು ಬಂಧಿಸಲಾಗಿದೆ. ಇನ್ನೊಬ್ಬನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದರು.