<p><strong>ಬಾರ್ಮರ್ (ರಾಜಸ್ಥಾನ):</strong> 30 ವರ್ಷದ ವ್ಯಕ್ತಿಯೊಬ್ಬ ಶನಿವಾರ ತನ್ನ ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳನ್ನು ನೀರಿನ ತೊಟ್ಟಿಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪೋಶಾಲಾ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುರ್ಖಾ ರಾಮ್ ಎಂಬುವವರು ತನ್ನ ಪುತ್ರಿಯರಾದ ಜಿಯೊ (9), ನೊಜಿ (ಏಳು), ಹೀನಾ (ಮೂರು) ಮತ್ತು ಒಂದೂವರೆ ವರ್ಷದ ಲಾಸಿಗೆ ವಿಷ ಪ್ರಾಶನ ಮಾಡಿಸಿದ್ದಾರೆ.</p>.<p>ಬಳಿಕ ಅವರನ್ನು ತನ್ನ ಮನೆಯ ಹೊರಗಿನ 13 ಅಡಿ ಆಳದ ನೀರಿನ ತೊಟ್ಟಿಯಲ್ಲಿ ಎಸೆದಿದ್ದಾರೆ ಮತ್ತು ತಾನು ಕೂಡ ಅದರೊಳಗೆ ಧುಮುಕಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಓಂಪ್ರಕಾಶ್ ತಿಳಿಸಿದ್ದಾರೆ.</p>.<p>ಆತ ನೀರಿನ ತೊಟ್ಟಿಗೆ ಜಿಗಿಯುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p>.<p>'ನಾಲ್ವರು ಮಕ್ಕಳು ನೀರಿನ ತೊಟ್ಟಿಯಲ್ಲಿ ಮುಳುಗಿದ್ದಾರೆ. ಅವರ ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಪುರ್ಖಾ ರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ' ಎಂದು ಅವರು ಹೇಳಿದರು.</p>.<p>ಐದು ತಿಂಗಳ ಹಿಂದಷ್ಟೇ ಕೋವಿಡ್ನಿಂದ ಪತ್ನಿ ಮೃತಪಟ್ಟಿದ್ದರಿಂದಾಗಿ ಅವರು ನೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆತ ತನ್ನ ಮಕ್ಕಳಿಗೆ ತಾಯಿಯಾಗಬಹುದೆಂದು ಹೆಂಡತಿಯ ತಂಗಿಯನ್ನು ಮದುವೆಯಾಗಲು ಬಯಸಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾರ್ಮರ್ (ರಾಜಸ್ಥಾನ):</strong> 30 ವರ್ಷದ ವ್ಯಕ್ತಿಯೊಬ್ಬ ಶನಿವಾರ ತನ್ನ ನಾಲ್ಕು ಅಪ್ರಾಪ್ತ ಹೆಣ್ಣು ಮಕ್ಕಳನ್ನು ನೀರಿನ ತೊಟ್ಟಿಗೆ ಎಸೆದು ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಾಲ್ವರು ಮಕ್ಕಳು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಪೋಶಾಲಾ ಗ್ರಾಮದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಪುರ್ಖಾ ರಾಮ್ ಎಂಬುವವರು ತನ್ನ ಪುತ್ರಿಯರಾದ ಜಿಯೊ (9), ನೊಜಿ (ಏಳು), ಹೀನಾ (ಮೂರು) ಮತ್ತು ಒಂದೂವರೆ ವರ್ಷದ ಲಾಸಿಗೆ ವಿಷ ಪ್ರಾಶನ ಮಾಡಿಸಿದ್ದಾರೆ.</p>.<p>ಬಳಿಕ ಅವರನ್ನು ತನ್ನ ಮನೆಯ ಹೊರಗಿನ 13 ಅಡಿ ಆಳದ ನೀರಿನ ತೊಟ್ಟಿಯಲ್ಲಿ ಎಸೆದಿದ್ದಾರೆ ಮತ್ತು ತಾನು ಕೂಡ ಅದರೊಳಗೆ ಧುಮುಕಿದ್ದಾರೆ ಎಂದು ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್ಒ) ಓಂಪ್ರಕಾಶ್ ತಿಳಿಸಿದ್ದಾರೆ.</p>.<p>ಆತ ನೀರಿನ ತೊಟ್ಟಿಗೆ ಜಿಗಿಯುತ್ತಿರುವುದನ್ನು ಕಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ಹೇಳಿದ್ದಾರೆ.</p>.<p>'ನಾಲ್ವರು ಮಕ್ಕಳು ನೀರಿನ ತೊಟ್ಟಿಯಲ್ಲಿ ಮುಳುಗಿದ್ದಾರೆ. ಅವರ ಮೃತದೇಹಗಳನ್ನು ಹತ್ತಿರದ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಯಿತು. ಪುರ್ಖಾ ರಾಮ್ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರ ಶವಗಳನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ' ಎಂದು ಅವರು ಹೇಳಿದರು.</p>.<p>ಐದು ತಿಂಗಳ ಹಿಂದಷ್ಟೇ ಕೋವಿಡ್ನಿಂದ ಪತ್ನಿ ಮೃತಪಟ್ಟಿದ್ದರಿಂದಾಗಿ ಅವರು ನೊಂದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೀಗಾಗಿ ಆತ ತನ್ನ ಮಕ್ಕಳಿಗೆ ತಾಯಿಯಾಗಬಹುದೆಂದು ಹೆಂಡತಿಯ ತಂಗಿಯನ್ನು ಮದುವೆಯಾಗಲು ಬಯಸಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ ಎಂದು ಅವರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>