<p><strong>ಲಖನೌ:</strong> ಕಾರ್ಯಕ್ರಮವೊಂದರಲ್ಲಿ ತನ್ನನ್ನು ‘ಬೋಡಾ‘ ಎಂದು ತಮಾಷೆ ಮಾಡಿದ ಸ್ನೇಹಿತನನ್ನು ಮಹಡಿ ಮೇಲಿನಿಂದ ತಳ್ಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.</p>.<p>ಲಖನೌನಿಂದ ಸುಮಾರು 125 ಕಿ.ಮಿ ದೂರದಲ್ಲಿ ಇರುವ ಹರ್ದೋಯಿಯಲ್ಲಿ ಈ ಘಟನೆ ನಡೆದಿದೆ.</p>.<p>ಹರ್ದೋಯಿ ಜಿಲ್ಲೆಯ ಮಾಲುಪುರ್ ನಿವಾಸಿ ಸುನಿಲ್ ಕುಮಾರ್ ಎಂಬವರೇ ಮೃತ ದುರ್ದೈವಿ.</p>.<p>ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ್ ಹಾಗೂ ಅವರ ಸ್ನೇಹಿತ ಅವಿನಾಶ್ ಕುಮಾರ್ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಸುನಿಲ್ ಕುಮಾರ್, ಅವಿನಾಶ್ ಅವರನ್ನು ‘ಬೋಡಾ‘ ಎಂದು ಛೇಡಿಸಿದ್ದಾರೆ.</p>.<p>ಇದರಿಂದ ಕುಪಿತಗೊಂಡ ಅವಿನಾಶ್, ಸುನಿಲ್ ಅವರನ್ನು ಮಹಡಿಯ ಮೇಲಿನಿಂದ ತಳ್ಳಿದ್ದಾರೆ. ಬಿದ್ದ ರಭಸಕ್ಕೆ ಸುನಿಲ್ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾರಿಯಾಗದೇ ಮೃತಪಟ್ಟಿದ್ದಾರೆ.</p>.<p>ಇಬ್ಬರು ಒಂದೇ ಬೈಕ್ನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಊಟದ ವೇಳೆ ಅವಿನಾಶ್ ಅವರನ್ನು ಸುನಿಲ್ ‘ಬೋಡಾ‘ ಎಂದು ಕರೆದಿದ್ದಾರೆ. ಇದೇ ಕಾರಣಕ್ಕಾಗಿ ಅವಿನಾಶ್, ಸುನಿಲ್ ಅವರನ್ನು ಮಹಡಿಯಿಂದ ತಳ್ಳಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ.</p>.<p>ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಅವಿನಾಶ್ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶರುಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ:</strong> ಕಾರ್ಯಕ್ರಮವೊಂದರಲ್ಲಿ ತನ್ನನ್ನು ‘ಬೋಡಾ‘ ಎಂದು ತಮಾಷೆ ಮಾಡಿದ ಸ್ನೇಹಿತನನ್ನು ಮಹಡಿ ಮೇಲಿನಿಂದ ತಳ್ಳಿ ಕೊಲೆ ಮಾಡಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದಿಂದ ವರದಿಯಾಗಿದೆ.</p>.<p>ಲಖನೌನಿಂದ ಸುಮಾರು 125 ಕಿ.ಮಿ ದೂರದಲ್ಲಿ ಇರುವ ಹರ್ದೋಯಿಯಲ್ಲಿ ಈ ಘಟನೆ ನಡೆದಿದೆ.</p>.<p>ಹರ್ದೋಯಿ ಜಿಲ್ಲೆಯ ಮಾಲುಪುರ್ ನಿವಾಸಿ ಸುನಿಲ್ ಕುಮಾರ್ ಎಂಬವರೇ ಮೃತ ದುರ್ದೈವಿ.</p>.<p>ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ್ ಹಾಗೂ ಅವರ ಸ್ನೇಹಿತ ಅವಿನಾಶ್ ಕುಮಾರ್ ನಡುವೆ ವಾಗ್ವಾದ ನಡೆದಿದ್ದು, ಈ ವೇಳೆ ಸುನಿಲ್ ಕುಮಾರ್, ಅವಿನಾಶ್ ಅವರನ್ನು ‘ಬೋಡಾ‘ ಎಂದು ಛೇಡಿಸಿದ್ದಾರೆ.</p>.<p>ಇದರಿಂದ ಕುಪಿತಗೊಂಡ ಅವಿನಾಶ್, ಸುನಿಲ್ ಅವರನ್ನು ಮಹಡಿಯ ಮೇಲಿನಿಂದ ತಳ್ಳಿದ್ದಾರೆ. ಬಿದ್ದ ರಭಸಕ್ಕೆ ಸುನಿಲ್ ಅವರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯ್ತಾದರೂ ಚಿಕಿತ್ಸೆ ಫಲಕಾರಿಯಾರಿಯಾಗದೇ ಮೃತಪಟ್ಟಿದ್ದಾರೆ.</p>.<p>ಇಬ್ಬರು ಒಂದೇ ಬೈಕ್ನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಊಟದ ವೇಳೆ ಅವಿನಾಶ್ ಅವರನ್ನು ಸುನಿಲ್ ‘ಬೋಡಾ‘ ಎಂದು ಕರೆದಿದ್ದಾರೆ. ಇದೇ ಕಾರಣಕ್ಕಾಗಿ ಅವಿನಾಶ್, ಸುನಿಲ್ ಅವರನ್ನು ಮಹಡಿಯಿಂದ ತಳ್ಳಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯನ್ನು ಪೊಲೀಸರು ಹಂಚಿಕೊಂಡಿದ್ದಾರೆ.</p>.<p>ಘಟನಾ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ ಅವಿನಾಶ್ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶರುಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>