ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವು ಕಳ್ಳಸಾಗಣೆ ಆರೋಪ: ಹಲ್ಲೆ ನಡೆಸಿ ವ್ಯಕ್ತಿಯ ಹತ್ಯೆ

ಏಳು ಮಂದಿ ವಶಕ್ಕೆ
Last Updated 14 ಜೂನ್ 2021, 9:01 IST
ಅಕ್ಷರ ಗಾತ್ರ

ಜೈಪುರ: ಗೋವು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಏಳೆಂಟು ಜನರ ಗುಂಪೊಂದು ಒಬ್ಬನ ಮೇಲೆ ತೀವ್ರ ಹಲ್ಲೆ ನಡೆಸಿ, ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ತೀವ್ರವಾಗಿ ಗಾಯಗೊಳಿಸಿದ ಘಟನೆ ರಾಜಸ್ಥಾನದ ಚಿತ್ತೋರ್‌ಗಡ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹತ್ಯೆಗೀಡಾದ ವ್ಯಕ್ತಿಯನ್ನು ಬಾಬು ಭಿಲ್ (25) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪಿಂಟು ಭಿಲ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸಂಬಂಧ ಏಳು ಜನರನ್ನು ವಶಕ್ಕೆ ಪಡೆಯಲಾಗಿದೆ.

ಬಾಬು ಮತ್ತು ಪಿಂಟು ಅವರು ಜೂನ್ 13ರ ಮಧ್ಯರಾತ್ರಿಯಲ್ಲಿ ಜಾನುವಾರುಗಳನ್ನು ಮಧ್ಯಪ್ರದೇಶಕ್ಕೆ ಸಾಗಿಸುತ್ತಿದ್ದಾಗ ಆರೋಪಿಗಳು ಭಿಲ್ಖಂಡ ಬಳಿ ಹಿಡಿದು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

’ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ‘ ಎಂದು ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ರವಿ ಮೆಹರ್ಡಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT