ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ವ್ಯಕ್ತಿಯನ್ನು ಹತ್ಯೆಗೈದ ನಕ್ಸಲರು

Last Updated 3 ಜನವರಿ 2022, 15:57 IST
ಅಕ್ಷರ ಗಾತ್ರ

ರಾಯಪುರ: ಪೊಲೀಸರಿಗೆ ಮಾಹಿತಿ ನೀಡುತ್ತಿರುವುದಾಗಿ ಆರೋಪಿಸಿ ಛತ್ತೀಸಗಡದ ಕಂಕೇರ ಜಿಲ್ಲೆಯಲ್ಲಿ 28 ವರ್ಷದ ವ್ಯಕ್ತಿಯೊಬ್ಬನನ್ನು ನಕ್ಸಲರು ಗುಂಡಿಟ್ಟು ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೊಯಾಲಿಬೇಡ ಪೊಲೀಸ್ ಠಾಣಾ ವ್ಯಾಪ್ತಿಯ ಬಂದ್ರಂಗಿ ಗ್ರಾಮದ ನಿವಾಸಿಯಾದ ಮಹೇಶ್ ಭಗೇಲ್ ಎಂಬುವವರನ್ನು ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಕಂಕೇರ ಸೂಪರಿಂಟೆಂಡೆಂಟ್ ಶಲಾಬ್ ಸಿನ್ಹಾ ತಿಳಿಸಿದ್ದಾರೆ.

ನಕ್ಸಲರು ಸ್ಥಳದಲ್ಲಿ ಯಾವುದೇ ಕರಪತ್ರ ಇತ್ಯಾದಿಗಳನ್ನು ಬಿಟ್ಟು ಹೋಗದ ಕಾರಣ ಹತ್ಯೆಯ ಹಿಂದಿನ ನಿಖರ ಉದ್ದೇಶ ಸದ್ಯಕ್ಕೆ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಹತ್ಯೆಗೊಳಗಾದ ವ್ಯಕ್ತಿಯು ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಆರೋಪಿಗಳ ಪತ್ತೆಗೆ ಶೋಧಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾನುವಾರವಷ್ಟೇ ಬಿಜಾಪುರ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥರೊಬ್ಬರನ್ನು ಪೊಲೀಸರಿಗೆ ಮಾಹಿತಿ ನೀಡುತ್ತಿರುವ ಆರೋಪದ ಮೇಲೆ ನಕ್ಸಲರು ಹತ್ಯೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT