ನಕ್ಸಲರು ಸ್ಥಳದಲ್ಲಿ ಯಾವುದೇ ಕರಪತ್ರ ಇತ್ಯಾದಿಗಳನ್ನು ಬಿಟ್ಟು ಹೋಗದ ಕಾರಣ ಹತ್ಯೆಯ ಹಿಂದಿನ ನಿಖರ ಉದ್ದೇಶ ಸದ್ಯಕ್ಕೆ ತಿಳಿದುಬಂದಿಲ್ಲ. ಪ್ರಾಥಮಿಕ ಮಾಹಿತಿ ಪ್ರಕಾರ, ಹತ್ಯೆಗೊಳಗಾದ ವ್ಯಕ್ತಿಯು ಪೊಲೀಸ್ ಮಾಹಿತಿದಾರ ಎಂದು ಶಂಕಿಸಿ ಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಆರೋಪಿಗಳ ಪತ್ತೆಗೆ ಶೋಧಕಾರ್ಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.