<p><strong>ಹೈದರಾಬಾದ್: </strong>ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್ ಭಯದಿಂದಾಗಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರೀಂನಗರ ಜಿಲ್ಲೆಯ ವ್ಯಕ್ತಿಯು ಮುಂಜಾನೆ 1 ಗಂಟೆಯಿಂದ 2ರ ಸುಮಾರಿಗೆ ಆಸ್ಪತ್ರೆಯ ತನ್ನ ಕೋಣೆಗೆ ಹೊಂದಿಕೊಂಡಂತಿದ್ದ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವ್ಯಕ್ತಿಯು ನೇಣು ಹಾಕಿಕೊಂಡಿರುವುದನ್ನು ನರ್ಸ್ ಗಮನಿಸಿದ್ದಾರೆ. ಬಳಿಕ ಆಸ್ಪತ್ರೆಯ ಇತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೋವಿಡ್-19 ಸೋಂಕು ತಗುಲಿದ್ದು ದೃಢಪಟ್ಟಿದ್ದರಿಂದಾಗಿ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಪ್ರಾಥಮಿಕ ತನಿಖೆ ಪ್ರಕಾರ, ಕೊರೊನಾ ವೈರಸ್ ಸೋಂಕಿನ ಭಯದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದಿದ್ದಾರೆ. ಕೋವಿಡ್-19ನಿಂದಾಗಿ ಕಳೆದ ಕೆಲವು ದಿನಗಳಿಂದಲೂ ಈ ವ್ಯಕ್ತಿ ಭಯಭೀತನಾಗಿದ್ದ ಎಂದು ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋವಿಡ್-19 ಸೋಂಕಿತ 60 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ವೈರಸ್ ಭಯದಿಂದಾಗಿ ಮಂಗಳವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಕರೀಂನಗರ ಜಿಲ್ಲೆಯ ವ್ಯಕ್ತಿಯು ಮುಂಜಾನೆ 1 ಗಂಟೆಯಿಂದ 2ರ ಸುಮಾರಿಗೆ ಆಸ್ಪತ್ರೆಯ ತನ್ನ ಕೋಣೆಗೆ ಹೊಂದಿಕೊಂಡಂತಿದ್ದ ಶೌಚಗೃಹದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ವ್ಯಕ್ತಿಯು ನೇಣು ಹಾಕಿಕೊಂಡಿರುವುದನ್ನು ನರ್ಸ್ ಗಮನಿಸಿದ್ದಾರೆ. ಬಳಿಕ ಆಸ್ಪತ್ರೆಯ ಇತರ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೋವಿಡ್-19 ಸೋಂಕು ತಗುಲಿದ್ದು ದೃಢಪಟ್ಟಿದ್ದರಿಂದಾಗಿ ಕಳೆದ ನಾಲ್ಕು ದಿನಗಳ ಹಿಂದಷ್ಟೇ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.</p>.<p>ಪ್ರಾಥಮಿಕ ತನಿಖೆ ಪ್ರಕಾರ, ಕೊರೊನಾ ವೈರಸ್ ಸೋಂಕಿನ ಭಯದಿಂದಾಗಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದಿದ್ದಾರೆ. ಕೋವಿಡ್-19ನಿಂದಾಗಿ ಕಳೆದ ಕೆಲವು ದಿನಗಳಿಂದಲೂ ಈ ವ್ಯಕ್ತಿ ಭಯಭೀತನಾಗಿದ್ದ ಎಂದು ಮೃತರ ಕುಟುಂಬ ಸದಸ್ಯರು ಪೊಲೀಸರಿಗೆ ತಿಳಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>