<p><strong>ಭೋಪಾಲ್:</strong> ಮಧ್ಯಪ್ರದೇಶದ ಭೋಪಾಲ್ ಮತ್ತು ಇಂದೋರ್ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ ಪಾಕಿಸ್ತಾನಕ್ಕೆ ಕೊಂಡೊಯ್ಯುವದಾಗಿ ಬೆದರಿಕೆ ಹಾಕಿದ ಆರೋಪದಡಿ ರಾಜಾಭೋಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈತ, ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಕರೆ ಮಾಡಿ, ವಿಮಾನ ಅಪಹರಿಸುವ ಬೆದರಿಕೆ ಹಾಕಿದ್ದ ಎಂದು ಭೋಪಾಲ್ನ ಗಾಂಧಿನಗರ ಪೊಲೀಸ್ ಠಾಣೆ ಉಸ್ತುವಾರಿ ಅರುಣ್ ಶರ್ಮಾ ಬುಧವಾರ ಸುದ್ದಿ ಸಂಸ್ಥೆಗೆ ತಿಳಿಸಿದರು.</p>.<p>ಈ ಬೆದರಿಕೆ ಕರೆ ಬಂದ ನಂತರ ವಿಮಾನ ನಿಲ್ದಾಣ ನಿರ್ವಹಣೆಯ ಅಧಿಕಾರಿಗಳು, ಗಾಂಧಿನಗರ ಪೊಲೀಸರಿಗೆ ದೂರು ನೀಡಿದರು.</p>.<p>‘ವಿಮಾನಗಳನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಂಗಳವಾರ ತಡರಾತ್ರಿ ಶುಜಲ್ಪುರ ಪಟ್ಟಣದಲ್ಲಿ (ಭೋಪಾಲ್ನಿಂದ ಸುಮಾರು 100 ಕಿ.ಮೀ) ಬಂಧಿಸಿದ್ದೇವೆ. ಪ್ರಕರಣದ ತನಿಖೆಯ ಭಾಗವಾಗಿ ಆತನನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ‘ ಎಂದು ಅಧಿಕಾರಿ ಹೇಳಿದ್ದಾರೆ.</p>.<p>ಬೆದರಿಕೆ ಕರೆಯ ನಂತರ ಭೋಪಾಲ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದರು. ಭದ್ರತಾ ಸಿಬ್ಬಂದಿ ತೀವ್ರವಾಗಿ ಪರಿಶೀಲಿಸಿದ ನಂತರವೇ ಮಂಗಳವಾರ ಸಂಜೆ ಭೋಪಾಲ್ನಿಂದ ಮುಂಬೈಗೆ ತೆರಳುವ ವಿಮಾನಗಳು ಸಂಚಾರ ಆರಂಭಿಸಿದ್ದಾಗಿ ಪೊಲೀಸ್ ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭೋಪಾಲ್:</strong> ಮಧ್ಯಪ್ರದೇಶದ ಭೋಪಾಲ್ ಮತ್ತು ಇಂದೋರ್ ವಿಮಾನ ನಿಲ್ದಾಣಗಳಿಂದ ವಿಮಾನಗಳನ್ನು ಅಪಹರಿಸಿ ಪಾಕಿಸ್ತಾನಕ್ಕೆ ಕೊಂಡೊಯ್ಯುವದಾಗಿ ಬೆದರಿಕೆ ಹಾಕಿದ ಆರೋಪದಡಿ ರಾಜಾಭೋಜ್ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಈತ, ಮಂಗಳವಾರ ಸಂಜೆ 5 ಗಂಟೆ ಸುಮಾರಿಗೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಕರೆ ಮಾಡಿ, ವಿಮಾನ ಅಪಹರಿಸುವ ಬೆದರಿಕೆ ಹಾಕಿದ್ದ ಎಂದು ಭೋಪಾಲ್ನ ಗಾಂಧಿನಗರ ಪೊಲೀಸ್ ಠಾಣೆ ಉಸ್ತುವಾರಿ ಅರುಣ್ ಶರ್ಮಾ ಬುಧವಾರ ಸುದ್ದಿ ಸಂಸ್ಥೆಗೆ ತಿಳಿಸಿದರು.</p>.<p>ಈ ಬೆದರಿಕೆ ಕರೆ ಬಂದ ನಂತರ ವಿಮಾನ ನಿಲ್ದಾಣ ನಿರ್ವಹಣೆಯ ಅಧಿಕಾರಿಗಳು, ಗಾಂಧಿನಗರ ಪೊಲೀಸರಿಗೆ ದೂರು ನೀಡಿದರು.</p>.<p>‘ವಿಮಾನಗಳನ್ನು ಅಪಹರಿಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಮಂಗಳವಾರ ತಡರಾತ್ರಿ ಶುಜಲ್ಪುರ ಪಟ್ಟಣದಲ್ಲಿ (ಭೋಪಾಲ್ನಿಂದ ಸುಮಾರು 100 ಕಿ.ಮೀ) ಬಂಧಿಸಿದ್ದೇವೆ. ಪ್ರಕರಣದ ತನಿಖೆಯ ಭಾಗವಾಗಿ ಆತನನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ‘ ಎಂದು ಅಧಿಕಾರಿ ಹೇಳಿದ್ದಾರೆ.</p>.<p>ಬೆದರಿಕೆ ಕರೆಯ ನಂತರ ಭೋಪಾಲ್ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಮತ್ತೊಬ್ಬ ಪೊಲೀಸ್ ಅಧಿಕಾರಿ ತಿಳಿಸಿದರು. ಭದ್ರತಾ ಸಿಬ್ಬಂದಿ ತೀವ್ರವಾಗಿ ಪರಿಶೀಲಿಸಿದ ನಂತರವೇ ಮಂಗಳವಾರ ಸಂಜೆ ಭೋಪಾಲ್ನಿಂದ ಮುಂಬೈಗೆ ತೆರಳುವ ವಿಮಾನಗಳು ಸಂಚಾರ ಆರಂಭಿಸಿದ್ದಾಗಿ ಪೊಲೀಸ್ ಅಧಿಕಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>