‘ಖುತಘಾಟ್ ಜಲಾಶಯದಿಂದ ಭಾನುವಾರ ಸಂಜೆ ಹೆಚ್ಚುವರಿ ನೀರು ಬಿಡುಗಡೆ ಮಾಡಿದ್ದ ವೇಳೆ ಜಿತೇಂದರ್ ಅವರು ಅಣೆಕಟ್ಟೆಯಿಂದ ಕೆಳಕ್ಕೆ ಜಿಗಿದಿದ್ದರು. ನೀರಿನ ಸೆಳೆತಕ್ಕೆ ಸಿಲುಕಿದ್ದ ಅವರು ಸಣ್ಣ ಬಂಡೆಯ ನೆರವಿನಿಂದ ಮೇಲೆ ಬಂದಿದ್ದಾರೆ. ಬಳಿಕ ಅಲ್ಲೇ ಇದ್ದ ಮರ ಏರಿ ಕುಳಿತಿದ್ದಾರೆ. ರಾತ್ರಿಯೆಲ್ಲಾ ಅಲ್ಲೇ ಇದ್ದು ಜೀವ ಉಳಿಸಿಕೊಂಡಿದ್ದಾರೆ’ ಎಂದು ಬಿಲಾಸಪುರದ ಪೊಲೀಸ್ ವರಿಷ್ಠಾಧಿಕಾರಿ ಪ್ರಶಾಂತ್ ಅಗರವಾಲ್ ಹೇಳಿದ್ದಾರೆ.