ಲಖನೌ: ವರ್ಷಾರಂಭದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧದೆಹಲಿಯ ಶಾಹೀನ್ಭಾಗ್ನಲ್ಲಿ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ್ದ ಕಪಿಲ್ ಗುಜ್ಜರ್ನನ್ನು ಪಕ್ಷಕ್ಕೆ ಸೇರಿಸಿಕೊಂಡ ಬಿಜೆಪಿಯು, ಕೆಲವೇ ಗಂಟೆಗಳಲ್ಲಿ ಅವರ ಸದಸ್ಯತ್ವವನ್ನು ರದ್ದುಗೊಳಿಸಿದೆ.
ಕಪಿಲ್, ಪಕ್ಷಕ್ಕೆ ಸೇರ್ಪಡೆಗೊಂಡ ಮಾಹಿತಿ ಹಿರಿಯ ನಾಯಕರ ಗಮನಕ್ಕೆ ಬರುತ್ತಿದ್ದಂತೆಯೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜೆ.ಪಿ.ಎಸ್.ರಾಥೋರ್ ಹೇಳಿದರು.
‘ಸ್ಥಳೀಯ ನಾಯಕರು ಅವರ ಸೇರ್ಪಡೆ ಪ್ರಕ್ರಿಯೆಯನ್ನು ನಡೆಸಿದ್ದರು. ಬಿಎಸ್ಪಿಯ ಕೆಲ ಯುವಕರು ಬಿಜೆಪಿ ಸೇರ್ಪಡೆಗೊಂಡಿದ್ದರು. ಈ ಪೈಕಿ ಕಪಿಲ್ ಕೂಡಾ ಇದ್ದರು. ಆದರೆ ಈ ಕುರಿತು ಪಕ್ಷದ ಹಿರಿಯ ನಾಯಕರ ಗಮನಕ್ಕೆ ಬರುತ್ತಿದ್ದಂತೆಯೇ, ಅವರ ಸದಸ್ಯತ್ವ ರದ್ದುಗೊಳಿಸಲಾಗಿದೆ’ ಎಂದು ರಾಥೋರ್ ಹೇಳಿದರು.