<p><strong>ಮುಂಬೈ:</strong>ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಪತ್ತೆಯಾಗಿದ್ದ ಸ್ಫೋಟಕ ತುಂಬಿದ್ದ ಎಸ್ಯುವಿ ಮಾಲೀಕ, ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೇನ್ ಅವರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ತಮ್ಮ ಎಸ್ಯುವಿ ಕಳವಾಗಿತ್ತು ಎಂದು ಅವರು ಹೇಳಿಕೊಂಡಿದ್ದರು.</p>.<p>ಥಾಣೆ ಜಿಲ್ಲೆಯ ಮುಂಬ್ರಾದಲ್ಲಿ ಹಿರೇನ್ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.</p>.<p><strong>ಓದಿ:</strong><a href="https://www.prajavani.net/india-news/abandoned-suv-near-ambani-residence-was-stolen-explosives-traced-to-nagpur-say-cops-808904.html" target="_blank">ಅಂಬಾನಿ ನಿವಾಸದ ಬಳಿ ಪತ್ತೆಯಾದ ಕಾರಿನ ರಹಸ್ಯ ಬಯಲು</a></p>.<p>ಅಂಬಾನಿ ಅವರ ‘ಅಂಟಿಲಿಯಾ’ ಐಷಾರಾಮಿ ನಿವಾಸದ ಬಳಿ ಫೆಬ್ರುವರಿ 24ರ ಮಧ್ಯರಾತ್ರಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಎಸ್ಯುವಿಯನ್ನು ನಿಲ್ಲಿಸಲಾಗಿತ್ತು. ಸುಮಾರು 20 ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರ ಅದರಲ್ಲಿ ಪತ್ತೆಯಾಗಿತ್ತು.</p>.<p>ಈ ಮಧ್ಯೆ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡಣವೀಸ್ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರ ಉಲ್ಲೇಖಿಸಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/jaish-ul-hind-claims-responsibility-of-placing-explosives-laden-suv-near-mukesh-ambanis-house-809390.html" target="_blank">ಅಂಬಾನಿ ನಿವಾಸದ ಬಳಿ ಸ್ಫೋಟಕ: ಹೊಣೆ ಹೊತ್ತ ಜೈಷ್ ಉಲ್ ಹಿಂದ್</a></p>.<p>ಹಿರೇನ್ ಅವರಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಸಚಿನ್ ವಾಜ್ ಅವರ ಪರಿಚಯ ಇರುವಂತಿದೆ ಎಂದೂ ಫಡಣವೀಸ್ ಹೇಳಿದ್ದಾರೆ.</p>.<p>‘ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು,ಅಪರಾಧ ವಿಭಾಗದಪೊಲೀಸರು ಸ್ಥಳಕ್ಕೆ ತಲುಪಿರಲಿಲ್ಲ. ಆದರೆ ಸಚಿನ್ ವಾಜ್ ಅಲ್ಲಿಗೆ ತಲುಪಿ ಕಾರು ಮತ್ತು ಅದರಲ್ಲಿದ್ದ ಪತ್ರವನ್ನು ವಶಪಡಿಸಿಕೊಂಡಿದ್ದರು’ ಎಂದೂ ಫಡಣವೀಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.</p>.<p>ಘಟನೆಯ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಾರೆ ಎಂದು ಪೊಲೀಸರು ಹೇಳಿದ ಮೇಲೆ, ತನಿಖೆಯ ಹೊಣೆಯನ್ನು ವಾಜ್ ಅವರಿಗೆ ವಹಿಸಿದ್ದೇಕೆ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/letter-taking-responsibility-for-car-near-ambanis-house-seems-to-be-a-hoax-police-810097.html" target="_blank">ಅಂಬಾನಿ ನಿವಾಸದ ಬಳಿ ಸ್ಫೋಟಕ: ‘ಜೈಷ್ ಉಲ್ ಹಿಂದ್’ ಹೆಸರಲ್ಲಿ ನಕಲಿ ಪತ್ರ</a></p>.<p>ಹಿರೇನ್ ಅವರಿಗೆ ಭದ್ರತೆ ಒದಗಿಸಬೇಕು ಎಂದೂ ಅವರು ಸರ್ಕಾರವನ್ನು ಒತ್ತಾಯಿಸಿದ್ದರು. ಅದಾದ ಕೆಲವೇ ನಿಮಿಷಗಳಲ್ಲಿ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.</p>.<p>ಈ ಕುರಿತು ಗೃಹ ಸಚಿವ ಅನಿಲ್ ದೇಶ್ಮುಖ್ ಉತ್ತರ ನೀಡಬೇಕು ಎಂದು ಫಡಣವೀಸ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ:</strong>ಉದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಪತ್ತೆಯಾಗಿದ್ದ ಸ್ಫೋಟಕ ತುಂಬಿದ್ದ ಎಸ್ಯುವಿ ಮಾಲೀಕ, ಥಾಣೆ ಮೂಲದ ಉದ್ಯಮಿ ಮನ್ಸುಖ್ ಹಿರೇನ್ ಅವರ ಮೃತದೇಹ ಶುಕ್ರವಾರ ಪತ್ತೆಯಾಗಿದೆ. ತಮ್ಮ ಎಸ್ಯುವಿ ಕಳವಾಗಿತ್ತು ಎಂದು ಅವರು ಹೇಳಿಕೊಂಡಿದ್ದರು.</p>.<p>ಥಾಣೆ ಜಿಲ್ಲೆಯ ಮುಂಬ್ರಾದಲ್ಲಿ ಹಿರೇನ್ ಮೃತದೇಹ ಪತ್ತೆಯಾಗಿರುವುದಾಗಿ ವರದಿಯಾಗಿದೆ.</p>.<p><strong>ಓದಿ:</strong><a href="https://www.prajavani.net/india-news/abandoned-suv-near-ambani-residence-was-stolen-explosives-traced-to-nagpur-say-cops-808904.html" target="_blank">ಅಂಬಾನಿ ನಿವಾಸದ ಬಳಿ ಪತ್ತೆಯಾದ ಕಾರಿನ ರಹಸ್ಯ ಬಯಲು</a></p>.<p>ಅಂಬಾನಿ ಅವರ ‘ಅಂಟಿಲಿಯಾ’ ಐಷಾರಾಮಿ ನಿವಾಸದ ಬಳಿ ಫೆಬ್ರುವರಿ 24ರ ಮಧ್ಯರಾತ್ರಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಎಸ್ಯುವಿಯನ್ನು ನಿಲ್ಲಿಸಲಾಗಿತ್ತು. ಸುಮಾರು 20 ಜಿಲೆಟಿನ್ ಕಡ್ಡಿಗಳು ಮತ್ತು ಬೆದರಿಕೆ ಪತ್ರ ಅದರಲ್ಲಿ ಪತ್ತೆಯಾಗಿತ್ತು.</p>.<p>ಈ ಮಧ್ಯೆ, ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ (ಎನ್ಐಎ) ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ದೇವೇಂದ್ರ ಫಡಣವೀಸ್ ಅವರು ಮಹಾರಾಷ್ಟ್ರ ವಿಧಾನಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆ ವಿಚಾರ ಉಲ್ಲೇಖಿಸಿ ಅವರು ಈ ವಿಚಾರ ಪ್ರಸ್ತಾಪಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/jaish-ul-hind-claims-responsibility-of-placing-explosives-laden-suv-near-mukesh-ambanis-house-809390.html" target="_blank">ಅಂಬಾನಿ ನಿವಾಸದ ಬಳಿ ಸ್ಫೋಟಕ: ಹೊಣೆ ಹೊತ್ತ ಜೈಷ್ ಉಲ್ ಹಿಂದ್</a></p>.<p>ಹಿರೇನ್ ಅವರಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ತನಿಖಾಧಿಕಾರಿ ಸಚಿನ್ ವಾಜ್ ಅವರ ಪರಿಚಯ ಇರುವಂತಿದೆ ಎಂದೂ ಫಡಣವೀಸ್ ಹೇಳಿದ್ದಾರೆ.</p>.<p>‘ಸ್ಥಳೀಯ ಪೊಲೀಸ್ ಠಾಣೆಯ ಅಧಿಕಾರಿಗಳು,ಅಪರಾಧ ವಿಭಾಗದಪೊಲೀಸರು ಸ್ಥಳಕ್ಕೆ ತಲುಪಿರಲಿಲ್ಲ. ಆದರೆ ಸಚಿನ್ ವಾಜ್ ಅಲ್ಲಿಗೆ ತಲುಪಿ ಕಾರು ಮತ್ತು ಅದರಲ್ಲಿದ್ದ ಪತ್ರವನ್ನು ವಶಪಡಿಸಿಕೊಂಡಿದ್ದರು’ ಎಂದೂ ಫಡಣವೀಸ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.</p>.<p>ಘಟನೆಯ ಬಗ್ಗೆ ಸಹಾಯಕ ಪೊಲೀಸ್ ಆಯುಕ್ತರು ತನಿಖೆ ನಡೆಸುತ್ತಾರೆ ಎಂದು ಪೊಲೀಸರು ಹೇಳಿದ ಮೇಲೆ, ತನಿಖೆಯ ಹೊಣೆಯನ್ನು ವಾಜ್ ಅವರಿಗೆ ವಹಿಸಿದ್ದೇಕೆ ಎಂದೂ ಅವರು ಪ್ರಶ್ನಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/letter-taking-responsibility-for-car-near-ambanis-house-seems-to-be-a-hoax-police-810097.html" target="_blank">ಅಂಬಾನಿ ನಿವಾಸದ ಬಳಿ ಸ್ಫೋಟಕ: ‘ಜೈಷ್ ಉಲ್ ಹಿಂದ್’ ಹೆಸರಲ್ಲಿ ನಕಲಿ ಪತ್ರ</a></p>.<p>ಹಿರೇನ್ ಅವರಿಗೆ ಭದ್ರತೆ ಒದಗಿಸಬೇಕು ಎಂದೂ ಅವರು ಸರ್ಕಾರವನ್ನು ಒತ್ತಾಯಿಸಿದ್ದರು. ಅದಾದ ಕೆಲವೇ ನಿಮಿಷಗಳಲ್ಲಿ ಮೃತದೇಹ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.</p>.<p>ಈ ಕುರಿತು ಗೃಹ ಸಚಿವ ಅನಿಲ್ ದೇಶ್ಮುಖ್ ಉತ್ತರ ನೀಡಬೇಕು ಎಂದು ಫಡಣವೀಸ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>