ಆರು ಜಿಲ್ಲೆಗಳ 22 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಕಾಂಗ್ರೆಸ್ ‘ಭದ್ರಕೋಟೆ’ ಎನಿಸಿರುವ ತೌಬಲ್ ಜಿಲ್ಲೆಯ ವಾಂಗ್ಜಿಂಗ್ ತೆಂಥ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿಮತದಾನ ಆರಂಭವಾಗುವ ಮುನ್ನ, ಅಂದರೆ ಬೆಳಿಗ್ಗೆ 6 ಗಂಟೆಯ ಸಮಯದಲ್ಲಿ ಅಪರಿಚಿತರ ಗುಂಡೇಟಿಗೆ ಬಿಜೆಪಿ ಕಾರ್ಯಕರ್ತರೊಬ್ಬರು ಬಲಿಯಾಗಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಎಲ್. ಅಮುಬಾ ಸಿಂಗ್ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.