ನವದೆಹಲಿ: ಎಎಪಿಯನ್ನು ಒಡೆದು ಬಿಜೆಪಿ ಸೇರಿದರೆ ತಮ್ಮ ವಿರುದ್ಧ ಇರುವ ಎಲ್ಲ ಪ್ರಕರಣಗಳನ್ನು ಕೈಬಿಡಲಾಗುವುದು ಎಂಬ ಸಂದೇಶವನ್ನು ತಮಗೆ ನೀಡಲಾಗಿತ್ತು ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಸೋಮವಾರ ಹೇಳಿದ್ದಾರೆ. ಇದರ ಆಡಿಯೊ ರೆಕಾರ್ಡ್ ಇದೆ. ಸೂಕ್ತ ಸಂದರ್ಭದಲ್ಲಿ ಅದನ್ನು ಬಹಿರಂಗಪಡಿಸಲಾಗುವುದು ಎಂದು ಎಎಪಿ ಮೂಲಗಳು ತಿಳಿಸಿವೆ. ಅಬಕಾರಿ ನೀತಿ ಜಾರಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪದಲ್ಲಿ ಸಿಸೋಡಿಯಾ ವಿರುದ್ಧ ಸಿಬಿಐ ತನಿಖೆ ನಡೆಸುತ್ತಿದೆ.