ಈ ಸಂಬಂಧ ಮಾಧ್ಯಮದವರೊಂದಿಗೆ ಭಾನುವಾರ ಮಾತನಾಡಿರುವ ಸೌರಭ್ ಭಾರದ್ವಾಜ್, 'ಮನೀಶ್ ಸಿಸೋಡಿಯಾ ಅವರಿಗೆ ಸಿಬಿಐ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದು, ಅವರ ವಿರುದ್ಧ ಮಾಡಲಾಗಿರುವ ಸುಳ್ಳು ಆರೋಪಗಳನ್ನು ಒಳಗೊಂಡ ದಾಖಲೆಗಳಿಗೆ ಸಹಿ ಹಾಕುವಂತೆ ಒತ್ತಡ ಹೇರಲಾಗುತ್ತಿದೆ. ಸಿಸೋಡಿಯಾ ವಿರುದ್ಧದ ಯಾವುದೇ ದಾಖಲೆಗಳು ಸಿಬಿಐ ಬಳಿ ಇಲ್ಲ. ಅವರ ವಿರುದ್ಧದ ಯಾವುದೇ ಸಾಕ್ಷ್ಯ ಕಳೆದುಹೋಗಿರುವ ಬಗ್ಗೆಯೂ ಉಲ್ಲೇಖ ಮಾಡಿಲ್ಲ. ಸಿಸೋಡಿಯಾ ಮನೆ ಮೇಲೆ ದಾಳಿ ಮಾಡಿದ್ದಾಗಲೂ ಯಾವ ದಾಖಲೆಯೂ ಸಿಕ್ಕಿಲ್ಲ' ಎಂದು ಹೇಳಿದ್ದಾರೆ.