ತಾವು ವಿಚಾರಣೆಗೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಸಿಸೋಡಿಯಾ ಹೇಳಿದ್ದಾರೆ. ‘ಸಿಬಿಐ ಅಧಿಕಾರಿಗಳು ತಮ್ಮ ಮನೆಗೆ ದಾಳಿ ಮಾಡಿ 14 ಗಂಟೆಗಳ ಶೋಧ ಕಾರ್ಯ ನಡೆಸಿದ್ದರು. ಬ್ಯಾಂಕ್ ಲಾಕರ್ ಅನ್ನು ಹುಡುಕಿದ್ದರು. ಎಲ್ಲಿಯೂ ಅವರಿಗೆ ಏನೂ ಸಿಕ್ಕಿರಲಿಲ್ಲ. ನಾಳೆ ಸಿಬಿಐ ಕೇಂದ್ರ ಕಚೇರಿಗೆ ಕರೆಯಲಾಗಿದೆ. ಸತ್ಯಮೇವ ಜಯತೇ’ ಎಂದು ಸಿಸೋಡಿಯಾ ಟ್ವೀಟ್ನಲ್ಲಿ ಹೇಳಿದ್ದಾರೆ.