<p><strong>ನವದೆಹಲಿ:</strong> ಕೋವಿಡ್–19 ಪಿಡುಗನ್ನು ಸಮರ್ಥವಾಗಿ ಎದುರಿಸಬೇಕು ಎಂದಾದರೆ, ಜನರಿಗೆ ಲಸಿಕೆ ನೀಡುವ ಕಾರ್ಯಕ್ರಮ ಚುರುಕುಗೊಳಿಸುವುದು ಅಗತ್ಯ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>ದೇಶದಲ್ಲಿ ಕೋವಿಡ್–19 ಪಿಡುಗಿನಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಅವರು ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಪಿಡುಗಿನ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಬೆನ್ನಲ್ಲೇ, ಡಾ.ಸಿಂಗ್ ಈ ಪತ್ರ ಬರೆದಿದ್ದಾರೆ.</p>.<p>‘ಎಷ್ಟು ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂಬುದು ಮುಖ್ಯವಲ್ಲ. ದೇಶದ ಒಟ್ಟು ಜನಸಂಖ್ಯೆ ಪೈಕಿ ಎಷ್ಟು ಪ್ರಮಾಣದ ಜನರಿಗೆ ನೀಡಲಾಗಿದೆ ಎಂಬುದರತ್ತ ಗಮನ ಹರಿಸಬೇಕು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ದೇಶದ ಜನಸಂಖ್ಯೆಯಲ್ಲಿ ಲಸಿಕೆ ನೀಡಲಾದ ಜನರ ಪ್ರಮಾಣ ಅತ್ಯಂತ ಕಡಿಮೆ ಇದೆ. ಹೀಗಾಗಿ ಸರಿಯಾದ ನೀತಿ ನಿರೂಪಣೆ, ಅನುಷ್ಠಾನದ ಮೂಲಕ ಈ ನಿಟ್ಟಿನಲ್ಲಿ ಕಡಿಮೆ ಅವಧಿಯಲ್ಲಿ ಗಣನೀಯ ಸಾಧನೆ ಮಾಡಲು ಸಾಧ್ಯವಾಗುವುದು’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಲಸಿಕೆಯ ಎಷ್ಟು ಡೋಸ್ಗಳ ಖರೀದಿಗೆ ಆದೇಶಿಸಲಾಗಿದೆ, ಈ ವರೆಗೆ ಎಷ್ಟು ಡೋಸ್ಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಗೊಳಿಸಬೇಕು’ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್–19 ಪಿಡುಗನ್ನು ಸಮರ್ಥವಾಗಿ ಎದುರಿಸಬೇಕು ಎಂದಾದರೆ, ಜನರಿಗೆ ಲಸಿಕೆ ನೀಡುವ ಕಾರ್ಯಕ್ರಮ ಚುರುಕುಗೊಳಿಸುವುದು ಅಗತ್ಯ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಹೇಳಿದ್ದಾರೆ.</p>.<p>ದೇಶದಲ್ಲಿ ಕೋವಿಡ್–19 ಪಿಡುಗಿನಿಂದಾಗಿ ಉದ್ಭವಿಸಿರುವ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾನುವಾರ ಅವರು ಪತ್ರ ಬರೆದಿದ್ದಾರೆ.</p>.<p>ಕೋವಿಡ್ ಪಿಡುಗಿನ ವಿರುದ್ಧದ ಹೋರಾಟ ಕುರಿತು ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಿದ ಬೆನ್ನಲ್ಲೇ, ಡಾ.ಸಿಂಗ್ ಈ ಪತ್ರ ಬರೆದಿದ್ದಾರೆ.</p>.<p>‘ಎಷ್ಟು ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂಬುದು ಮುಖ್ಯವಲ್ಲ. ದೇಶದ ಒಟ್ಟು ಜನಸಂಖ್ಯೆ ಪೈಕಿ ಎಷ್ಟು ಪ್ರಮಾಣದ ಜನರಿಗೆ ನೀಡಲಾಗಿದೆ ಎಂಬುದರತ್ತ ಗಮನ ಹರಿಸಬೇಕು’ ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ದೇಶದ ಜನಸಂಖ್ಯೆಯಲ್ಲಿ ಲಸಿಕೆ ನೀಡಲಾದ ಜನರ ಪ್ರಮಾಣ ಅತ್ಯಂತ ಕಡಿಮೆ ಇದೆ. ಹೀಗಾಗಿ ಸರಿಯಾದ ನೀತಿ ನಿರೂಪಣೆ, ಅನುಷ್ಠಾನದ ಮೂಲಕ ಈ ನಿಟ್ಟಿನಲ್ಲಿ ಕಡಿಮೆ ಅವಧಿಯಲ್ಲಿ ಗಣನೀಯ ಸಾಧನೆ ಮಾಡಲು ಸಾಧ್ಯವಾಗುವುದು’ ಎಂದೂ ಅವರು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಲಸಿಕೆಯ ಎಷ್ಟು ಡೋಸ್ಗಳ ಖರೀದಿಗೆ ಆದೇಶಿಸಲಾಗಿದೆ, ಈ ವರೆಗೆ ಎಷ್ಟು ಡೋಸ್ಗಳನ್ನು ಪೂರೈಕೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಬಹಿರಂಗಗೊಳಿಸಬೇಕು’ ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>