<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕವು ಇನ್ನೂ ಕೊನೆಗೊಂಡಿಲ್ಲ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.</p>.<p>ತಮ್ಮ ಮಾಸಿಕ ‘ಮನ್ ಕಿ ಬಾತ್’ನಲ್ಲಿ ಭಾನುವಾರ ಮಾತನಾಡಿದ ಅವರು, 'ಕೋವಿಡ್ ಸಾಂಕ್ರಾಮಿಕವು ಇನ್ನೂ ಕೊನೆಗೊಂಡಿಲ್ಲ. ಕೊರೊನಾ ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ‘ ಎಂದು ತಿಳಿಸಿದರು.</p>.<p>ಇದೇ ವೇಳೆ ಅಂಬೇಡ್ಕರ್ ಅವರನ್ನು ಸ್ಮರಿಸಿರುವ ಅವರು, ‘ಡಿಸೆಂಬರ್ ತಿಂಗಳಲ್ಲಿ ನಮಗೆ ಮತ್ತೊಂದು ಪ್ರಮುಖ ದಿನ ಬರಲಿದೆ. ಇದರಿಂದ ನಾವು ಸ್ಫೂರ್ತಿ ಪಡೆಯಬಹುದು. ಡಿಸೆಂಬರ್ 6 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿ. ಬಾಬಾ ಸಾಹೇಬರು ದೇಶ ಮತ್ತು ಸಮಾಜಕ್ಕಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ನಾವು ಕರ್ತವ್ಯಗಳನ್ನು ನಿರ್ವಹಿಸಬೇಕಿದೆ. ಇದನ್ನು ನಮ್ಮ ಸಂವಿಧಾನವು ನಿರೀಕ್ಷಿಸುತ್ತದೆ ಎಂಬುದನ್ನು ನಾವು ಮರೆಯಬಾರದು‘ ಎಂದು ಮೋದಿ ಹೇಳಿದರು.</p>.<p>‘ಮುಂದಿನ 2 ದಿನಗಳಲ್ಲಿ 2021ರ ಕೊನೆಯ ತಿಂಗಳಿಗೆ ಕಾಲಿಡುತ್ತೇವೆ. ಈ ತಿಂಗಳಲ್ಲಿ ನಾವು ನೌಕಾಪಡೆಯ ದಿನ ಮತ್ತು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಿದ್ದೇವೆ. ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವೀರ ಪುತ್ರರು ಮತ್ತು ತಾಯಂದಿರಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ‘ ಎಂದೂ ಪ್ರಧಾನಿ ತಿಳಿಸಿದರು.</p>.<p><strong>ಭಾರತೀಯ ಸ್ಟಾರ್ಟ್ಅಪ್ಗಳಿಂದ ಜಾಗತಿಕ ಸಮಸ್ಯೆಗಳಿಗೆ ಪರಿಹಾರ</strong></p>.<p>‘ಭಾರತದಲ್ಲಿ 70 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಒಂದುಬಿಲಿಯನ್ಗಿಂತಲೂ ಹೆಚ್ಚು ಮೌಲ್ಯವನ್ನು ದಾಟಿವೆ. ಅನೇಕ ಭಾರತೀಯರು ತಮ್ಮ ಸ್ಟಾರ್ಟ್ಅಪ್ಗಳ ಮೂಲಕ ಜಾಗತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತಿದ್ದಾರೆ‘ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೇಶದಲ್ಲಿ ಕೋವಿಡ್ ಸಾಂಕ್ರಾಮಿಕವು ಇನ್ನೂ ಕೊನೆಗೊಂಡಿಲ್ಲ ಎಂದು ಪ್ರಧಾನಿ ಮೋದಿ ಎಚ್ಚರಿಕೆ ನೀಡಿದರು.</p>.<p>ತಮ್ಮ ಮಾಸಿಕ ‘ಮನ್ ಕಿ ಬಾತ್’ನಲ್ಲಿ ಭಾನುವಾರ ಮಾತನಾಡಿದ ಅವರು, 'ಕೋವಿಡ್ ಸಾಂಕ್ರಾಮಿಕವು ಇನ್ನೂ ಕೊನೆಗೊಂಡಿಲ್ಲ. ಕೊರೊನಾ ಸೋಂಕಿನ ವಿರುದ್ಧ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ‘ ಎಂದು ತಿಳಿಸಿದರು.</p>.<p>ಇದೇ ವೇಳೆ ಅಂಬೇಡ್ಕರ್ ಅವರನ್ನು ಸ್ಮರಿಸಿರುವ ಅವರು, ‘ಡಿಸೆಂಬರ್ ತಿಂಗಳಲ್ಲಿ ನಮಗೆ ಮತ್ತೊಂದು ಪ್ರಮುಖ ದಿನ ಬರಲಿದೆ. ಇದರಿಂದ ನಾವು ಸ್ಫೂರ್ತಿ ಪಡೆಯಬಹುದು. ಡಿಸೆಂಬರ್ 6 ರಂದು ಬಾಬಾಸಾಹೇಬ್ ಅಂಬೇಡ್ಕರ್ ಅವರ ಪುಣ್ಯತಿಥಿ. ಬಾಬಾ ಸಾಹೇಬರು ದೇಶ ಮತ್ತು ಸಮಾಜಕ್ಕಾಗಿ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ನಾವು ಕರ್ತವ್ಯಗಳನ್ನು ನಿರ್ವಹಿಸಬೇಕಿದೆ. ಇದನ್ನು ನಮ್ಮ ಸಂವಿಧಾನವು ನಿರೀಕ್ಷಿಸುತ್ತದೆ ಎಂಬುದನ್ನು ನಾವು ಮರೆಯಬಾರದು‘ ಎಂದು ಮೋದಿ ಹೇಳಿದರು.</p>.<p>‘ಮುಂದಿನ 2 ದಿನಗಳಲ್ಲಿ 2021ರ ಕೊನೆಯ ತಿಂಗಳಿಗೆ ಕಾಲಿಡುತ್ತೇವೆ. ಈ ತಿಂಗಳಲ್ಲಿ ನಾವು ನೌಕಾಪಡೆಯ ದಿನ ಮತ್ತು ರಾಷ್ಟ್ರೀಯ ಧ್ವಜ ದಿನವನ್ನು ಆಚರಿಸಲಿದ್ದೇವೆ. ರಕ್ಷಣಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವೀರ ಪುತ್ರರು ಮತ್ತು ತಾಯಂದಿರಿಗೆ ನಾನು ನಮನ ಸಲ್ಲಿಸಲು ಬಯಸುತ್ತೇನೆ‘ ಎಂದೂ ಪ್ರಧಾನಿ ತಿಳಿಸಿದರು.</p>.<p><strong>ಭಾರತೀಯ ಸ್ಟಾರ್ಟ್ಅಪ್ಗಳಿಂದ ಜಾಗತಿಕ ಸಮಸ್ಯೆಗಳಿಗೆ ಪರಿಹಾರ</strong></p>.<p>‘ಭಾರತದಲ್ಲಿ 70 ಕ್ಕೂ ಹೆಚ್ಚು ಸ್ಟಾರ್ಟ್ಅಪ್ಗಳು ಒಂದುಬಿಲಿಯನ್ಗಿಂತಲೂ ಹೆಚ್ಚು ಮೌಲ್ಯವನ್ನು ದಾಟಿವೆ. ಅನೇಕ ಭಾರತೀಯರು ತಮ್ಮ ಸ್ಟಾರ್ಟ್ಅಪ್ಗಳ ಮೂಲಕ ಜಾಗತಿಕ ಸಮಸ್ಯೆಗಳಿಗೆ ಪರಿಹಾರಗಳನ್ನು ಒದಗಿಸುತ್ತಿದ್ದಾರೆ‘ ಎಂದು ಮೋದಿ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>