'ಮನದ ಮಾತು (ಮನ್ ಕಿ ಬಾತ್)' ಬಾನುಲಿ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಕೊರೊನಾ ಸಂದರ್ಭದಲ್ಲಿ ಖಾದಿ ಮಾಸ್ಕ್ಗಳು ಜನಪ್ರಿಯವಾಗಿವೆ. ಮೆಕ್ಸಿಕೊದ ಒಕ್ಸಾಕ ಪ್ರದೇಶದಲ್ಲಿಯೂ ಖಾದಿ ಮಾಸ್ಕ್ ತಯಾರಿಸಲಾಗುತ್ತಿದೆ. ಖಾದಿಯು ಪರಿಸರಸ್ನೇಹಿಯೂ ಶರೀರಸ್ನೇಹಿಯೂ ಆಗಿದೆ’ ಎಂದು ಹೇಳಿದ್ದಾರೆ.