‘ಸುಮಾರು 30 ವರ್ಷದ ವ್ಯಕ್ತಿಯನ್ನು ಬೇರೆಡೆ ಹತ್ಯೆ ಮಾಡಿಮಾಡಿರುವ ಶಂಕೆ ವ್ಯಕ್ತವಾಗಿದೆ. ಹತ್ಯೆ ಬಳಿಕ ಕಿಡಿಗೇಡಿಗಳು ಆತನ ಕತ್ತರಿಸಿದ ರುಂಡವನ್ನು ತಂದು ವಿಗ್ರಹದ ಪಾದದ ಬಳಿ ಇರಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತಿದೆ’ ಎಂದು ದೇವರಕೊಂಡದ ಉಪ ಪೊಲೀಸ್ ವರಿಷ್ಠಾಧಿಕಾರಿ ಆನಂದರೆಡ್ಡಿ ತಿಳಿಸಿದ್ದಾರೆ.