ಬುಡಕಟ್ಟು ಸಮುದಾಯದ ಜನರೇ ಹೆಚ್ಚಿರುವ ವಲ್ಸದ್ ಜಿಲ್ಲೆಯಲ್ಲಿ ಭಾನುವಾರ ನಡೆದ ರ್ಯಾಲಿಯಲ್ಲಿ ಅವರು ಮಾತನಾಡಿದರು. ‘ಹೇಗಾದರೂ ಮಾಡಿ ಬಿಜೆಪಿಯನ್ನು ಸೋಲಿಸಿ ಎಂದು ಅದೇ ಪಕ್ಷದ ನಾಯಕರು, ಕಾರ್ಯಕರ್ತರು ನನ್ನಲ್ಲಿರಸಹ್ಯವಾಗಿ ಮನವಿ ಮಾಡುತ್ತಿದ್ದಾರೆ. ನಾನು ಹೇಳುವುದು ಇಷ್ಟೆ. ಯಾವೆಲ್ಲಾ ನಾಯಕರು, ಕಾರ್ಯಕರ್ತರು ಬಿಜೆಪಿ ಸೋಲಬೇಕು ಎಂದು ಬಯಸಿದ್ದೀರೋ, ನೀವೆಲ್ಲಾ ರಹಸ್ಯವಾಗಿ ನನ್ನ ಪಕ್ಷದ ಪರ ಕೆಲಸ ಮಾಡಿ’ ಎಂದು ಸಲಹೆ ನೀಡಿದರು.