ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕನ್ವರ್‌ ಯಾತ್ರೆ: ಉತ್ತರ ಪ್ರದೇಶದಲ್ಲಿ ಭಕ್ತರ ಮೇಲೆ ಹರಿದ ಟ್ರಕ್, 5 ಮಂದಿ ಸಾವು

ಅಕ್ಷರ ಗಾತ್ರ

ಲಖನೌ: ಕನ್ವರ್‌ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಗ್ವಾಲಿಯರ್‌ನಲ್ಲಿ ಇಂದು (ಶನಿವಾರ) ಬೆಳಗಿನ ಜಾವ 2.15ರ ಸುಮಾರಿಗೆ ಅಪಘಾತ ಸಂಭವಿಸಿದೆ.

ಕನ್ವರ್‌ ಯಾತ್ರೆ ಕೈಗೊಂಡಿದ್ದ ಭಕ್ತರು ಹರಿದ್ವಾರದಿಂದ ಗ್ವಾಲಿಯರ್‌ಗೆ ಹೋಗುತ್ತಿದ್ದರು. ಘಟನೆ ಕುರಿತು ತನಿಖೆ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಶೀಘ್ರವೇ ಬಂಧಿಸಲಾಗುವುದು ಎಂದು ಆಗ್ರಾ ವಲಯದ ಎಡಿಜಿ ರಾಜೀವ್ ಕೃಷ್ಣ ತಿಳಿಸಿದ್ದಾರೆ. ‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT