ಕಳೆದ ತಿಂಗಳು ಕೇರಳದಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದರು. ಈ ತಿಂಗಳೂ ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರ ಭಕ್ತರ ಪ್ರವೇಶವನ್ನು ನಿಷೇಧಿಸಿ ಪತ್ತನಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಬಾರಿಯ ಯಾತ್ರೆಯ ಅವಧಿ ಕಳೆದ ವಾರ ಆರಂಭಗೊಂಡಿದ್ದು, ನೂರಾರು ಭಕ್ತರು ಯಾತ್ರೆ ಕೈಗೊಂಡಿದ್ದರು.