<p><strong>ನವದೆಹಲಿ:</strong> ಆಂಧ್ರ ಪ್ರದೇಶದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕನಿಷ್ಠ 30 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.</p>.<p>ಮೂರು ಬಸ್ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿರುವುದಾಗಿ ಶುಕ್ರವಾರ ವರದಿಯಾಗಿತ್ತು. ರಕ್ಷಣಾ ಕಾರ್ಯಾಚರಣೆ ತಂಡಗಳು ಹತ್ತಾರು ಮೃತದೇಹಗಳನ್ನು ಹೊರತೆಗೆದಿದ್ದವು. 18 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.</p>.<p>ದಕ್ಷಿಣ ಏಷ್ಯಾದಾದ್ಯಂತ ಹವಾಮಾನ ಬದಲಾವಣೆಯಿಂದಾಗಿ ಪ್ರತಿಕೂಲ ವಾತಾವರಣ ಸೃಷ್ಟಿಯಾಗಿದೆ. ಅರಣ್ಯನಾಶ, ಅತಿಯಾದ ಅಭಿವೃದ್ಧಿಯಿಂದಾಗಿ ಪ್ರಕೃತಿ ವಿಕೋಪಗಳಾಗುತ್ತಿವೆ ಎಂದು ತಜ್ಞರು ವಿಶ್ಲೇಷಿಸುತ್ತಿರುವುದಾಗಿ ವರದಿ ಉಲ್ಲೇಖಿಸಿದೆ.</p>.<p>ಭಾರಿ ಮಳೆ, ಪ್ರವಾಹ, ಭೂಕುಸಿತಗಳಿಂದಾಗಿ ಅಕ್ಟೋಬರ್ನಿಂದೀಚೆಗೆ ಭಾರತದಲ್ಲಿ ಹತ್ತಾರು ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಬಾರತದ ಹಲವೆಡೆ ಶನಿವಾರವೂ ಭಾರಿ ಮಳೆಯಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/india-news/saturdays-pilgrimage-to-sabarimala-prohibited-due-to-heavy-rains-885399.html" itemprop="url">ಕೇರಳದಲ್ಲಿ ಭಾರಿ ಮಳೆ: ಶನಿವಾರ ಶಬರಿಮಲೆ ಅಯ್ಯಪ್ಪನ ದರ್ಶನ ಸ್ಥಗಿತ </a></p>.<p>ಕಳೆದ ತಿಂಗಳು ಕೇರಳದಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದರು. ಈ ತಿಂಗಳೂ ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರ ಭಕ್ತರ ಪ್ರವೇಶವನ್ನು ನಿಷೇಧಿಸಿ ಪತ್ತನಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಬಾರಿಯ ಯಾತ್ರೆಯ ಅವಧಿ ಕಳೆದ ವಾರ ಆರಂಭಗೊಂಡಿದ್ದು, ನೂರಾರು ಭಕ್ತರು ಯಾತ್ರೆ ಕೈಗೊಂಡಿದ್ದರು.</p>.<p>ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಯಾತ್ರಾರ್ಥಿಗಳನ್ನು ತಡೆಯಲಾಗಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಆಂಧ್ರ ಪ್ರದೇಶದಲ್ಲಿ ಉಂಟಾಗಿರುವ ಭಾರಿ ಪ್ರವಾಹದಿಂದಾಗಿ ಕನಿಷ್ಠ 30 ಮಂದಿ ಮೃತಪಟ್ಟಿರುವ ಶಂಕೆ ಇದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.</p>.<p>ಮೂರು ಬಸ್ಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿರುವುದಾಗಿ ಶುಕ್ರವಾರ ವರದಿಯಾಗಿತ್ತು. ರಕ್ಷಣಾ ಕಾರ್ಯಾಚರಣೆ ತಂಡಗಳು ಹತ್ತಾರು ಮೃತದೇಹಗಳನ್ನು ಹೊರತೆಗೆದಿದ್ದವು. 18 ಮಂದಿ ಇನ್ನೂ ಪತ್ತೆಯಾಗಿಲ್ಲ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ.</p>.<p>ದಕ್ಷಿಣ ಏಷ್ಯಾದಾದ್ಯಂತ ಹವಾಮಾನ ಬದಲಾವಣೆಯಿಂದಾಗಿ ಪ್ರತಿಕೂಲ ವಾತಾವರಣ ಸೃಷ್ಟಿಯಾಗಿದೆ. ಅರಣ್ಯನಾಶ, ಅತಿಯಾದ ಅಭಿವೃದ್ಧಿಯಿಂದಾಗಿ ಪ್ರಕೃತಿ ವಿಕೋಪಗಳಾಗುತ್ತಿವೆ ಎಂದು ತಜ್ಞರು ವಿಶ್ಲೇಷಿಸುತ್ತಿರುವುದಾಗಿ ವರದಿ ಉಲ್ಲೇಖಿಸಿದೆ.</p>.<p>ಭಾರಿ ಮಳೆ, ಪ್ರವಾಹ, ಭೂಕುಸಿತಗಳಿಂದಾಗಿ ಅಕ್ಟೋಬರ್ನಿಂದೀಚೆಗೆ ಭಾರತದಲ್ಲಿ ಹತ್ತಾರು ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಬಾರತದ ಹಲವೆಡೆ ಶನಿವಾರವೂ ಭಾರಿ ಮಳೆಯಾಗುತ್ತಿದೆ.</p>.<p><strong>ಓದಿ:</strong><a href="https://www.prajavani.net/india-news/saturdays-pilgrimage-to-sabarimala-prohibited-due-to-heavy-rains-885399.html" itemprop="url">ಕೇರಳದಲ್ಲಿ ಭಾರಿ ಮಳೆ: ಶನಿವಾರ ಶಬರಿಮಲೆ ಅಯ್ಯಪ್ಪನ ದರ್ಶನ ಸ್ಥಗಿತ </a></p>.<p>ಕಳೆದ ತಿಂಗಳು ಕೇರಳದಲ್ಲಿ ಪ್ರವಾಹ ಮತ್ತು ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 42 ಮಂದಿ ಮೃತಪಟ್ಟಿದ್ದರು. ಈ ತಿಂಗಳೂ ಕೇರಳದಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಶಬರಿಮಲೆಯ ಪ್ರಸಿದ್ಧ ಅಯ್ಯಪ್ಪ ದೇವಸ್ಥಾನಕ್ಕೆ ಶನಿವಾರ ಭಕ್ತರ ಪ್ರವೇಶವನ್ನು ನಿಷೇಧಿಸಿ ಪತ್ತನಂತಿಟ್ಟ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಬಾರಿಯ ಯಾತ್ರೆಯ ಅವಧಿ ಕಳೆದ ವಾರ ಆರಂಭಗೊಂಡಿದ್ದು, ನೂರಾರು ಭಕ್ತರು ಯಾತ್ರೆ ಕೈಗೊಂಡಿದ್ದರು.</p>.<p>ಪಂಪಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಯಾತ್ರಾರ್ಥಿಗಳನ್ನು ತಡೆಯಲಾಗಿದೆ ಎಂದು ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>