<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಬೀರ್ಭೂಮ್ನಲ್ಲಿ ಮಂಗಳವಾರ ಬಸ್ ಮತ್ತು ಆಟೊ ರಿಕ್ಷಾ ನಡುವೆಡಿಕ್ಕಿಯಾಗಿ ಎಂಟು ಮಂದಿ ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ 9 ಜನ ಮೃತಪಟ್ಟಿದ್ದಾರೆ.</p>.<p>ಬೀರ್ಭೂಮ್ ಜಿಲ್ಲೆಯ ಮಲ್ಲಾರ್ಪುರ ಸಮೀಪದ ರಾಮ್ಪುರಹಟ್ನಲ್ಲಿ ರಾಷ್ಟ್ರೀಯ ಹೆದ್ದಾರಿ–60ರಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮಿತಿಗಿಂತ ಹೆಚ್ಚು ಜನರನ್ನು ತುಂಬಿಕೊಂಡು ತೆರಳುತ್ತಿದ್ದ ರಿಕ್ಷಾ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿವೆ.</p>.<p><a href="https://www.prajavani.net/india-news/nitish-kumar-as-oppositions-pm-candidate-in-2024-many-wary-of-his-u-turns-961867.html" itemprop="url">2024ಕ್ಕೆ ಪ್ರಧಾನಿ ಅಭ್ಯರ್ಥಿಯಾಗುವರೇ ನಿತೀಶ್? ನಿಷ್ಠೆ ಮೇಲೆ ಎಲ್ಲರಿಗೂ ಅನುಮಾನ </a></p>.<p>ಮೃತಪಟ್ಟ ಎಂಟು ಮಂದಿ ಮಹಿಳೆಯರು ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಮತ್ತೊಬ್ಬ ವ್ಯಕ್ತಿ ಆಟೊ ಚಾಲಕ ಎಂದು ಬೀರ್ಭೂಮ್ ಜಿಲ್ಲಾ ಎಸ್ಪಿ ನಾಗೇಂದ್ರನಾಥ್ ತ್ರಿಪಾಠಿ ತಿಳಿಸಿದ್ದಾರೆ.</p>.<p><strong>ಪ್ರಧಾನಿ ಸಂತಾಪ, ₹2 ಲಕ್ಷ ಪರಿಹಾರ ಘೋಷಣೆ</strong></p>.<p>ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ಬೀರ್ಭೂಮ್ನಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿರುವುದು ಅತೀವ ವೇದನೆ ಉಂಟುಮಾಡಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು’ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಪಶ್ಚಿಮ ಬಂಗಾಳದ ಬೀರ್ಭೂಮ್ನಲ್ಲಿ ಮಂಗಳವಾರ ಬಸ್ ಮತ್ತು ಆಟೊ ರಿಕ್ಷಾ ನಡುವೆಡಿಕ್ಕಿಯಾಗಿ ಎಂಟು ಮಂದಿ ಮಹಿಳಾ ಕೃಷಿ ಕಾರ್ಮಿಕರು ಸೇರಿದಂತೆ 9 ಜನ ಮೃತಪಟ್ಟಿದ್ದಾರೆ.</p>.<p>ಬೀರ್ಭೂಮ್ ಜಿಲ್ಲೆಯ ಮಲ್ಲಾರ್ಪುರ ಸಮೀಪದ ರಾಮ್ಪುರಹಟ್ನಲ್ಲಿ ರಾಷ್ಟ್ರೀಯ ಹೆದ್ದಾರಿ–60ರಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಮಿತಿಗಿಂತ ಹೆಚ್ಚು ಜನರನ್ನು ತುಂಬಿಕೊಂಡು ತೆರಳುತ್ತಿದ್ದ ರಿಕ್ಷಾ ಮತ್ತು ದಕ್ಷಿಣ ಬಂಗಾಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿಯಾಗಿವೆ.</p>.<p><a href="https://www.prajavani.net/india-news/nitish-kumar-as-oppositions-pm-candidate-in-2024-many-wary-of-his-u-turns-961867.html" itemprop="url">2024ಕ್ಕೆ ಪ್ರಧಾನಿ ಅಭ್ಯರ್ಥಿಯಾಗುವರೇ ನಿತೀಶ್? ನಿಷ್ಠೆ ಮೇಲೆ ಎಲ್ಲರಿಗೂ ಅನುಮಾನ </a></p>.<p>ಮೃತಪಟ್ಟ ಎಂಟು ಮಂದಿ ಮಹಿಳೆಯರು ಆಟೊ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು. ಮತ್ತೊಬ್ಬ ವ್ಯಕ್ತಿ ಆಟೊ ಚಾಲಕ ಎಂದು ಬೀರ್ಭೂಮ್ ಜಿಲ್ಲಾ ಎಸ್ಪಿ ನಾಗೇಂದ್ರನಾಥ್ ತ್ರಿಪಾಠಿ ತಿಳಿಸಿದ್ದಾರೆ.</p>.<p><strong>ಪ್ರಧಾನಿ ಸಂತಾಪ, ₹2 ಲಕ್ಷ ಪರಿಹಾರ ಘೋಷಣೆ</strong></p>.<p>ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.</p>.<p>‘ಪಶ್ಚಿಮ ಬಂಗಾಳದ ಬೀರ್ಭೂಮ್ನಲ್ಲಿ ಸಂಭವಿಸಿದ ದುರಂತದಲ್ಲಿ ಜೀವಹಾನಿಯಾಗಿರುವುದು ಅತೀವ ವೇದನೆ ಉಂಟುಮಾಡಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಮೃತಪಟ್ಟವರ ಕುಟುಂಬದವರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50,000 ಪರಿಹಾರ ನೀಡಲಾಗುವುದು’ ಎಂದು ಪ್ರಧಾನಮಂತ್ರಿಗಳ ಕಾರ್ಯಾಲಯ ಟ್ವೀಟ್ ಮಾಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>