‘ಕಳೆದ ವಾರದ ಅಂತ್ಯಕ್ಕೆ ಒಟ್ಟು 9,000 ಮಂದಿ ಪ್ರಸಾದವನ್ನು ಕಾಯ್ದಿರಿಸಿದ್ದಾರೆ. ಈ ಪೈಕಿ ಕೇರಳ ಹಾಗೂ ದಕ್ಷಿಣ ಭಾರತದ ರಾಜ್ಯಗಳ ಮಂದಿಯೇ ಹೆಚ್ಚಿದ್ದಾರೆ. ಮಹಾರಾಷ್ಟ್ರದವರೂ ಸ್ಪೀಡ್ ಪೋಸ್ಟ್ ಮೂಲಕ ಪ್ರಸಾದ ಪಡೆಯಲು ಆಸಕ್ತಿ ತೋರಿದ್ದಾರೆ. ರಾಜಸ್ಥಾನ, ಕಾಶ್ಮೀರದಲ್ಲೂ ಕೆಲವರು ಈ ಯೋಜನೆಯ ಮಾಹಿತಿ ಪಡೆದುಕೊಂಡಿದ್ದಾರೆ’ ಎಂದು ಕೇರಳದ ಅಂಚೆ ಇಲಾಖೆಯ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.