<p><strong>ಮುಂಬೈ</strong>: ತೌತೆ ಚಂಡಮಾರುತದ ಹೊಡೆತದಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ‘ಪಿ305’ ಬಾರ್ಜ್ನಲ್ಲಿದ್ದವರ ಪೈಕಿ 89 ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ನೌಕಾಪಡೆ ಬುಧವಾರ ಹೇಳಿದೆ.</p>.<p>‘ಪಿ305’ ಬಾರ್ಜ್ನಲ್ಲಿದ್ದ 273 ಸಿಬ್ಬಂದಿ ಪೈಕಿ 184 ಜನರನ್ನು ರಕ್ಷಿಸಲಾಗಿದೆ. ಇನ್ನೂ ಎರಡು ಬಾರ್ಜ್ಗಳು ಹಾಗೂ ತೈಲ ಘಟಕದ ಸಿಬ್ಬಂದಿಯೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.</p>.<p>‘ಐಎನ್ಎಸ್ ತೇಗ್, ಐಎನ್ಎಸ್ ಬೆಟ್ವಾ, ಐಎನ್ಎಸ್ ಬಿಯಾಸ್ ಹಡಗುಗಳು, ಪಿ8ಐ ವಿಮಾನ ಹಾಗೂ ನೌಕಾಪಡೆಯ ಹೆಲಿಕಾಪ್ಟರ್ಗಳು ಶೋಧ ಹಾಗೂ ರಕ್ಷಣಾ ಕಾರ್ಯವನ್ನು ಮುಂದುವರಿಸಿವೆ’ ಎಂದು ನೌಕಾಪಡೆಯ ವಕ್ತಾರರೊಬ್ಬರು ತಿಳಿಸಿದರು.</p>.<p>‘ಒಎನ್ಜಿಸಿ ಹಾಗೂ ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದ ಹಡಗುಗಳು, ಬಾರ್ಜ್ಗಳನ್ನು ಸುರಕ್ಷಿತವಾಗಿ ತೀರಕ್ಕೆ ತರುವ ಕಾರ್ಯದಲ್ಲಿ ತೊಡಗಿವೆ. ಐಎನ್ಎಸ್ ತಲ್ವಾರ್ ಸಹ ಈ ಕಾರ್ಯದಲ್ಲಿ ನೆರವಾಗುತ್ತಿದೆ’ ಎಂದು ಅವರು ಹೇಳಿದರು.</p>.<p><a href="https://www.prajavani.net/india-news/cyclone-tauktae-effects-in-maharashtra-and-gujrat-831621.html" itemprop="url">ತೌತೆ ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ತತ್ತರ, 33 ಸಾವು </a></p>.<p>‘ಕಳೆದ ನಾಲ್ಕು ದಶಕಗಳಲ್ಲಿ ನಡೆಸಿದ ವಿವಿಧ ರಕ್ಷಣಾ ಕಾರ್ಯಗಳ ಪೈಕಿ ಈಗ ನಡೆಯುತ್ತಿರುವುದು ಅತ್ಯಂತ ಸವಾಲಿನದ್ದಾಗಿದೆ’ ಎಂದು ನೌಕಾಪಡೆಯ ವೈಸ್ಅಡ್ಮಿರಲ್ ಮುರಳೀಧರ್ ಎಸ್.ಪವಾರ್ ಹೇಳಿದರು.</p>.<p><a href="https://www.prajavani.net/india-news/cyclone-tauktae-weakens-to-bring-rain-in-many-states-says-imd-831637.html" itemprop="url">ದುರ್ಬಲಗೊಂಡ ತೌತೆ: ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ</strong>: ತೌತೆ ಚಂಡಮಾರುತದ ಹೊಡೆತದಿಂದ ಅರಬ್ಬಿ ಸಮುದ್ರದಲ್ಲಿ ಸಿಲುಕಿರುವ ‘ಪಿ305’ ಬಾರ್ಜ್ನಲ್ಲಿದ್ದವರ ಪೈಕಿ 89 ಜನರು ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ನೌಕಾಪಡೆ ಬುಧವಾರ ಹೇಳಿದೆ.</p>.<p>‘ಪಿ305’ ಬಾರ್ಜ್ನಲ್ಲಿದ್ದ 273 ಸಿಬ್ಬಂದಿ ಪೈಕಿ 184 ಜನರನ್ನು ರಕ್ಷಿಸಲಾಗಿದೆ. ಇನ್ನೂ ಎರಡು ಬಾರ್ಜ್ಗಳು ಹಾಗೂ ತೈಲ ಘಟಕದ ಸಿಬ್ಬಂದಿಯೂ ಸುರಕ್ಷಿತವಾಗಿದ್ದಾರೆ ಎಂದು ತಿಳಿಸಿದೆ.</p>.<p>‘ಐಎನ್ಎಸ್ ತೇಗ್, ಐಎನ್ಎಸ್ ಬೆಟ್ವಾ, ಐಎನ್ಎಸ್ ಬಿಯಾಸ್ ಹಡಗುಗಳು, ಪಿ8ಐ ವಿಮಾನ ಹಾಗೂ ನೌಕಾಪಡೆಯ ಹೆಲಿಕಾಪ್ಟರ್ಗಳು ಶೋಧ ಹಾಗೂ ರಕ್ಷಣಾ ಕಾರ್ಯವನ್ನು ಮುಂದುವರಿಸಿವೆ’ ಎಂದು ನೌಕಾಪಡೆಯ ವಕ್ತಾರರೊಬ್ಬರು ತಿಳಿಸಿದರು.</p>.<p>‘ಒಎನ್ಜಿಸಿ ಹಾಗೂ ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾದ ಹಡಗುಗಳು, ಬಾರ್ಜ್ಗಳನ್ನು ಸುರಕ್ಷಿತವಾಗಿ ತೀರಕ್ಕೆ ತರುವ ಕಾರ್ಯದಲ್ಲಿ ತೊಡಗಿವೆ. ಐಎನ್ಎಸ್ ತಲ್ವಾರ್ ಸಹ ಈ ಕಾರ್ಯದಲ್ಲಿ ನೆರವಾಗುತ್ತಿದೆ’ ಎಂದು ಅವರು ಹೇಳಿದರು.</p>.<p><a href="https://www.prajavani.net/india-news/cyclone-tauktae-effects-in-maharashtra-and-gujrat-831621.html" itemprop="url">ತೌತೆ ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ತತ್ತರ, 33 ಸಾವು </a></p>.<p>‘ಕಳೆದ ನಾಲ್ಕು ದಶಕಗಳಲ್ಲಿ ನಡೆಸಿದ ವಿವಿಧ ರಕ್ಷಣಾ ಕಾರ್ಯಗಳ ಪೈಕಿ ಈಗ ನಡೆಯುತ್ತಿರುವುದು ಅತ್ಯಂತ ಸವಾಲಿನದ್ದಾಗಿದೆ’ ಎಂದು ನೌಕಾಪಡೆಯ ವೈಸ್ಅಡ್ಮಿರಲ್ ಮುರಳೀಧರ್ ಎಸ್.ಪವಾರ್ ಹೇಳಿದರು.</p>.<p><a href="https://www.prajavani.net/india-news/cyclone-tauktae-weakens-to-bring-rain-in-many-states-says-imd-831637.html" itemprop="url">ದುರ್ಬಲಗೊಂಡ ತೌತೆ: ವಿವಿಧ ರಾಜ್ಯಗಳಲ್ಲಿ ಮಳೆ ಸಾಧ್ಯತೆ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>