ಹೈದರಾಬಾದ್: ಕೇಂದ್ರ ಸರ್ಕಾರ ಪ್ರಕಟಿಸಿರುವ ಸೈನಿಕರ ನೇಮಕಾತಿಯ ಹೊಸ ‘ಅಗ್ನಿಪಥ ಯೋಜನೆ’ ವಿರುದ್ಧ ತೆಲಂಗಾಣ, ಬಿಹಾರ, ಹರಿಯಾಣ, ಸಿಕಂದರಾಬಾದ್ ಸೇರಿದಂತೆ ವಿವಿಧೆಡೆ ಶುಕ್ರವಾರ ಭಾರಿ ಪ್ರತಿಭಟನೆ ನಡೆದಿದೆ.
ಹೈದರಾಬಾದ್ನಲ್ಲಿ ‘ಅಗ್ನಿಪಥ’ ಯೋಜನೆ ವಿರೋಧಿಸಿ ನಡೆಸುತ್ತಿರುವ ಹೋರಾಟ ಹಿಂಸಾತ್ಮಕ ಸ್ವರೂಪ ಪಡೆದಿದ್ದು, ವ್ಯಕ್ತಿಯೊಬ್ಬರು ಮೃತ್ತಪಟ್ಟಿರುವುದಾಗಿ ವರದಿಯಾಗಿದೆ.
ಪ್ರತಿಭಟನೆ ವೇಳೆ ಗಾಯಗೊಂಡಿದ್ದ 13 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಗಾಂಧಿ ಆಸ್ಪತ್ರೆಯ ಅಧಿಕಾರಿ ರಾಜಾರಾಮ್ ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್ಐ’ ಟ್ವೀಟ್ ಮಾಡಿದೆ.
Hyderabad, Telangana | 1 dead among 13 people who were brought to the hospital. Among the injured, 1 person in critical condition, he received a chest injury. We are examining the remaining: Raja Rao, Superintendent, Gandhi Hospital, on protest over the Agnnipath scheme pic.twitter.com/jYLyqYmTY7
ಸೇನೆಯ ಅಲ್ಪಾವಧಿ ನೇಮಕಾತಿ ಯೋಜನೆ ‘ಅಗ್ನಿಪಥ’ವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ನೇಮಕಾತಿ ಯೋಜನೆ ವಿರುದ್ಧ ದೇಶದಾದ್ಯಂತ ಆಕಾಂಕ್ಷಿಗಳು ಆಕ್ರೋಶಗೊಂಡಿದ್ದು, ಹಲವೆಡೆ ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ್ದಾರೆ.