ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಗರ: ಬೀದಿ ನಾಯಿಗಳ ದಾಳಿ, 17 ಪ್ರವಾಸಿಗರು ಸೇರಿ 39 ಮಂದಿಗೆ ಗಾಯ

Last Updated 30 ಏಪ್ರಿಲ್ 2022, 7:04 IST
ಅಕ್ಷರ ಗಾತ್ರ

ಶ್ರೀನಗರ: ಇಲ್ಲಿನ ದಲ್‌ಗೇಟ್‌ ಪ್ರದೇಶದಲ್ಲಿ ಬೀದಿ ನಾಯಿಗಳ ದಾಳಿಗೆ 19 ಪ್ರವಾಸಿಗರು ಸೇರಿ 39 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಶ್ರೀನಗರದ ಶ್ರೀಮಹಾರಾಜ ಹರಿಸಿಂಗ್‌ (ಎಸ್‌ಎಂಎಚ್‌ಎಸ್‌) ಆಸ್ಪತ್ರೆಗೆ ದಾಖಲಿಸಲಾಗಿದೆ.

ದಲ್‌ಗೇಟ್‌ನ ಘಾಟ್‌ ನಂ.5ರ ಬುಚ್ವಾರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬೀದಿ ನಾಯಿಗಳು ದಾಳಿ ನಡೆಸಿದ್ದು, ಬೀದಿ ನಾಯಿಗಳ ಹಾವಳಿ ತಡೆಗಟ್ಟುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

‘ಬೀದಿ ನಾಯಿಗಳ ದಾಳಿಯಿಂದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಆರೋಗ್ಯ ಸ್ಥಿರವಾಗಿದೆ’ ಎಂದು ಎಸ್‌ಎಂಎಚ್‌ಎಸ್‌ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಕನ್ವಾಲ್‌ಜೀತ್ ಸಿಂಗ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT