<p><strong>ಲತೇಹರ್: </strong>ಹಲವು ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದ ಸಿಪಿಐ(ಮಾವೋವಾದಿ) ಕಮಾಂಡರ್ನನ್ನು ಜಾರ್ಖಂಡ್ನ ಲತೇಹರ್ ಜಿಲ್ಲೆಯ ಕಾಡಿನಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಂಧಿತ ಮಾವೋವಾದಿ ಕಿಶೋರ್ ಸಿಂಗ್ ಮುಂಬರುವ ಪಂಚಾಯತ್ ಚುನಾವಣೆಗೆ ಮುಂಚಿತವಾಗಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡುವ ಉದ್ದೇಶದಿಂದ ಅವರ ಚಲನವಲನದ ಮೇಲೆ ನಿಗಾ ಇಟ್ಟಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಹೇಳಿದ್ದಾರೆ. ಈತನ ತಲೆಗೆ ಸರ್ಕಾರ ₹ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು.</p>.<p>ಪೊಲೀಸ್ ವರಿಷ್ಠಾಧಿಕಾರಿ ವಿಪುಲ್ ಪಾಂಡೆ ನೇತೃತ್ವದ ಪೊಲೀಸ್ ತಂಡ, ಕುಮುಡಿಹ್ ಹಳ್ಳಿಯ ಸಮೀಪದ ಆಂಟಿಖೇಟಾ ಕಾಡಿನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.</p>.<p>ಬಂಧಿತ ವ್ಯಕ್ತಿ ತಾನು ಸಿಪಿಐ (ಮಾವೋವಾದಿ) ನ ಉಪ ವಲಯದ ಕಮಾಂಡರ್ ಕಿಶೋರ್ ಸಿಂಗ್ ಎಂದು ಗುರುತು ಹೇಳಿಕೊಂಡಿದ್ದಾನೆ.</p>.<p>ರಾಜ್ಯದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯ ದೃಷ್ಟಿಯಿಂದ ಮಾವೋವಾದಿಗಳು ಸಕ್ರಿಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಂಗ್ ವಿರುದ್ಧ ಲತೇಹರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 13 ಕ್ಕೂ ಅಧಿಕ ಪ್ರಕರಣಗಳಿವೆ. ಇದರಲ್ಲಿ ಗರು ಬ್ಲಾಕ್ ಅಭಿವೃದ್ಧಿ ಅಧಿಕಾರಿಯ ಅಪಹರಣ ಮತ್ತು ಸುಲಿಗೆ ಪ್ರಕರಣಗಳೂ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲತೇಹರ್: </strong>ಹಲವು ಪ್ರಕರಣಗಳಲ್ಲಿ ಪೊಲೀಸರು ಹುಡುಕುತ್ತಿದ್ದ ಸಿಪಿಐ(ಮಾವೋವಾದಿ) ಕಮಾಂಡರ್ನನ್ನು ಜಾರ್ಖಂಡ್ನ ಲತೇಹರ್ ಜಿಲ್ಲೆಯ ಕಾಡಿನಲ್ಲಿ ಶನಿವಾರ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ಬಂಧಿತ ಮಾವೋವಾದಿ ಕಿಶೋರ್ ಸಿಂಗ್ ಮುಂಬರುವ ಪಂಚಾಯತ್ ಚುನಾವಣೆಗೆ ಮುಂಚಿತವಾಗಿ ಭದ್ರತಾ ಸಿಬ್ಬಂದಿ ಮೇಲೆ ದಾಳಿ ಮಾಡುವ ಉದ್ದೇಶದಿಂದ ಅವರ ಚಲನವಲನದ ಮೇಲೆ ನಿಗಾ ಇಟ್ಟಿದ್ದನು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಜನಿ ಅಂಜನ್ ಹೇಳಿದ್ದಾರೆ. ಈತನ ತಲೆಗೆ ಸರ್ಕಾರ ₹ 5 ಲಕ್ಷ ಬಹುಮಾನ ಘೋಷಣೆ ಮಾಡಿತ್ತು.</p>.<p>ಪೊಲೀಸ್ ವರಿಷ್ಠಾಧಿಕಾರಿ ವಿಪುಲ್ ಪಾಂಡೆ ನೇತೃತ್ವದ ಪೊಲೀಸ್ ತಂಡ, ಕುಮುಡಿಹ್ ಹಳ್ಳಿಯ ಸಮೀಪದ ಆಂಟಿಖೇಟಾ ಕಾಡಿನಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಈ ಸಂದರ್ಭ ಪೊಲೀಸರನ್ನು ಕಂಡು ಓಡಿ ಹೋಗಲು ಯತ್ನಿಸಿದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿತ್ತು.</p>.<p>ಬಂಧಿತ ವ್ಯಕ್ತಿ ತಾನು ಸಿಪಿಐ (ಮಾವೋವಾದಿ) ನ ಉಪ ವಲಯದ ಕಮಾಂಡರ್ ಕಿಶೋರ್ ಸಿಂಗ್ ಎಂದು ಗುರುತು ಹೇಳಿಕೊಂಡಿದ್ದಾನೆ.</p>.<p>ರಾಜ್ಯದಲ್ಲಿ ಮುಂಬರುವ ಪಂಚಾಯತ್ ಚುನಾವಣೆಯ ದೃಷ್ಟಿಯಿಂದ ಮಾವೋವಾದಿಗಳು ಸಕ್ರಿಯವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಸಿಂಗ್ ವಿರುದ್ಧ ಲತೇಹರ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ 13 ಕ್ಕೂ ಅಧಿಕ ಪ್ರಕರಣಗಳಿವೆ. ಇದರಲ್ಲಿ ಗರು ಬ್ಲಾಕ್ ಅಭಿವೃದ್ಧಿ ಅಧಿಕಾರಿಯ ಅಪಹರಣ ಮತ್ತು ಸುಲಿಗೆ ಪ್ರಕರಣಗಳೂ ಸೇರಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>