<p class="title"><strong>ಮಲಪ್ಪುರಂ, ಕೇರಳ</strong>: ಕೇರಳ ಪೊಲೀಸ್ನ ಭಯೋತ್ಪಾದನಾ ವಿರೋಧಿ ದಳದ (ಎಟಿಎಸ್) ಸಿಬ್ಬಂದಿ ಮಂಗಳವಾರ ಸಿಪಿಐ (ಮಾವೋವಾದಿ) ಕಾರ್ಯಕರ್ತ ಸಿ.ಪಿ.ಉಸ್ಮಾನ್ ಎಂಬಾತನನ್ನು ಬಂಧಿಸಿದ್ದಾರೆ..</p>.<p class="title">ಈತನ ವಿರುದ್ಧ 2019ರಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ವಿಸ್ತರಿಸುವ ಸಂಘಟನೆಯೊಂದರ ಜೊತೆಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮೊದಲಿಗೆ ಕೋಯಿಕ್ಕೊಡ್ನ ಪಂತೀರಂಕಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಎನ್ಐಎ ಕೈಗೊಂಡಿತ್ತು.</p>.<p class="title">ಪ್ರಕರಣ ಈ ಸಂಬಂಧ ಈಗಾಗಲೇ ಅಲಾನ್, ತ್ವಾವಹಾ ಮತ್ತು ವಿಜಿತ್ ವಿಜಯನ್ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಹಾಗೂ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯ ವಿವಿಧ ಸೆಕ್ಷನ್ಗಳ ಅನ್ವಯ ಪ್ರಕರಣ ದಾಖಲಿಸಿದ್ದು, ಎರ್ನಾಕುಲಂನ ವಿಶೇಷ ಕೋರ್ಟ್ನಲ್ಲಿ ಎನ್ಎಐ ಆರೋಪಪಟ್ಟಿಯನ್ನೂ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ಮಲಪ್ಪುರಂ, ಕೇರಳ</strong>: ಕೇರಳ ಪೊಲೀಸ್ನ ಭಯೋತ್ಪಾದನಾ ವಿರೋಧಿ ದಳದ (ಎಟಿಎಸ್) ಸಿಬ್ಬಂದಿ ಮಂಗಳವಾರ ಸಿಪಿಐ (ಮಾವೋವಾದಿ) ಕಾರ್ಯಕರ್ತ ಸಿ.ಪಿ.ಉಸ್ಮಾನ್ ಎಂಬಾತನನ್ನು ಬಂಧಿಸಿದ್ದಾರೆ..</p>.<p class="title">ಈತನ ವಿರುದ್ಧ 2019ರಲ್ಲಿ ಪ್ರಕರಣ ದಾಖಲಾಗಿತ್ತು. ರಾಜ್ಯದಲ್ಲಿ ಭಯೋತ್ಪಾದನಾ ಚಟುವಟಿಕೆ ವಿಸ್ತರಿಸುವ ಸಂಘಟನೆಯೊಂದರ ಜೊತೆಗೆ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p class="title">ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈತನ ವಿರುದ್ಧ ಮೊದಲಿಗೆ ಕೋಯಿಕ್ಕೊಡ್ನ ಪಂತೀರಂಕಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಎನ್ಐಎ ಕೈಗೊಂಡಿತ್ತು.</p>.<p class="title">ಪ್ರಕರಣ ಈ ಸಂಬಂಧ ಈಗಾಗಲೇ ಅಲಾನ್, ತ್ವಾವಹಾ ಮತ್ತು ವಿಜಿತ್ ವಿಜಯನ್ ಎಂಬವರನ್ನು ಈಗಾಗಲೇ ಬಂಧಿಸಲಾಗಿದೆ. ಇವರ ವಿರುದ್ಧ ಐಪಿಸಿ ಹಾಗೂ ಹಾಗೂ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆಯ ವಿವಿಧ ಸೆಕ್ಷನ್ಗಳ ಅನ್ವಯ ಪ್ರಕರಣ ದಾಖಲಿಸಿದ್ದು, ಎರ್ನಾಕುಲಂನ ವಿಶೇಷ ಕೋರ್ಟ್ನಲ್ಲಿ ಎನ್ಎಐ ಆರೋಪಪಟ್ಟಿಯನ್ನೂ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>