<p><strong>ತಿರುವನಂತಪುರ:</strong> ಕೇರಳದವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ಮೃತಪಟ್ಟಿದ್ದಾನೆ.</p>.<p>ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಿಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ಬೋಲ್ಟ್ ಕಮಾಂಡೊಗಳು ವಾಡಿಕೆಯಂತೆ ಗಸ್ತು ತಿರುಗುತ್ತಿದ್ದ ವೇಳೆಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.</p>.<p>ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ತಿಳಿದುಬಂದಿಲ್ಲ. ಆದರೆ ಮೃತ ವ್ಯಕ್ತಿ ಮಲಯಾಳಿಯಲ್ಲ ಎಂದು ಶಂಕಿಸಲಾಗಿದೆ.</p>.<p>ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯಪ್ರದೇಶದಲ್ಲಿ ‘ಕೂಂಬಿಂಗ್‘ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿದ್ದು, ಅದು ನಕಲಿ ಎನ್ಕೌಂಟರ್ ಎಂದು ಆರೋಪಿಸಲಾಗಿತ್ತು. ಅದಾದ ನಂತರ ಈ ಹೊಸ ‘ಎನ್ಕೌಂಟರ್‘ ನಡೆದಿದೆ.</p>.<p>ಕಳೆದ ವರ್ಷ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲೂ ಒಬ್ಬ ಮಹಿಳೆ ಸೇರಿದಂತೆ ಮೂವರು ಮಾವೊವಾದಿಗಳು ಸಾವನ್ನಪ್ಪಿದ್ದರು.</p>.<p>ಏತನ್ಮಧ್ಯೆ, ಮಂಗಳವಾರ ನಡೆದ ಈ ಘಟನೆ ಕೆಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಇದೊಂದು ‘ನಕಲಿ ಎನ್ಕೌಂಟರ್‘ ಎಂದು ಕಾಂಗ್ರೆಸ್ ಆರೋಪಿಸಿದೆ. ಪಿಣರಾಯಿ ವಿಜಯನ್ ಸರ್ಕಾರವು ಮಾವೋವಾದಿಗಳನ್ನು ಕೊಲ್ಲುತ್ತಿದೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುವನಂತಪುರ:</strong> ಕೇರಳದವಯನಾಡ್ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಕೇರಳ ಪೊಲೀಸ್ ಪಡೆಯ ಥಂಡರ್ಬೋಲ್ಟ್ ಕಮಾಂಡೊ ನಡೆಸಿದ ಎನ್ಕೌಂಟರ್ನಲ್ಲಿ ಒಬ್ಬ ಶಂಕಿತ ಮಾವೊವಾದಿ ಮೃತಪಟ್ಟಿದ್ದಾನೆ.</p>.<p>ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಿಗ್ಗೆ 6 ಗಂಟೆಗೆ ಈ ಎನ್ಕೌಂಟರ್ ನಡೆದಿದೆ. ಬಣಾಸುರಮಲೆಬಳಿಯ ಅರಣ್ಯ ಪ್ರದೇಶದಲ್ಲಿ ಥಂಡರ್ಬೋಲ್ಟ್ ಕಮಾಂಡೊಗಳು ವಾಡಿಕೆಯಂತೆ ಗಸ್ತು ತಿರುಗುತ್ತಿದ್ದ ವೇಳೆಮೂವರು ಶಂಕಿತ ಮಾವೊವಾದಿಗಳನ್ನು ಗುರುತಿಸಿದ್ದಾರೆ.</p>.<p>ಕಮಾಂಡೊಗಳು ಮತ್ತು ಶಂಕಿತ ಮಾವೊವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ, ಒಬ್ಬ ವ್ಯಕ್ತಿ ಸತ್ತು, ಇಬ್ಬರು ಪರಾರಿಯಾಗಿದ್ದಾರೆ. ಘಟನಾ ಸ್ಥಳದಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ವ್ಯಕ್ತಿಯ ಗುರುತು ಇನ್ನೂ ತಿಳಿದುಬಂದಿಲ್ಲ. ಆದರೆ ಮೃತ ವ್ಯಕ್ತಿ ಮಲಯಾಳಿಯಲ್ಲ ಎಂದು ಶಂಕಿಸಲಾಗಿದೆ.</p>.<p>ಘಟನಾ ಸ್ಥಳಕ್ಕೆ ಧಾವಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಅರಣ್ಯಪ್ರದೇಶದಲ್ಲಿ ‘ಕೂಂಬಿಂಗ್‘ ಕಾರ್ಯಾಚರಣೆ ನಡೆಸಿದ್ದಾರೆ.</p>.<p>ಕಳೆದ ವರ್ಷ ವಯನಾಡಿನ ವೈತಿರಿ ಬಳಿಯ ಲಕ್ಕಿಡಿಯ ರೆಸಾರ್ಟ್ನಲ್ಲಿ ಮಾವೋವಾದಿ ಸ್ಥಳೀಯ ಮುಖಂಡ ಸಿ ಪಿ ಜಲೀಲ್ನನ್ನು ಹತ್ಯೆ ಮಾಡಲಾಗಿದ್ದು, ಅದು ನಕಲಿ ಎನ್ಕೌಂಟರ್ ಎಂದು ಆರೋಪಿಸಲಾಗಿತ್ತು. ಅದಾದ ನಂತರ ಈ ಹೊಸ ‘ಎನ್ಕೌಂಟರ್‘ ನಡೆದಿದೆ.</p>.<p>ಕಳೆದ ವರ್ಷ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲೂ ಒಬ್ಬ ಮಹಿಳೆ ಸೇರಿದಂತೆ ಮೂವರು ಮಾವೊವಾದಿಗಳು ಸಾವನ್ನಪ್ಪಿದ್ದರು.</p>.<p>ಏತನ್ಮಧ್ಯೆ, ಮಂಗಳವಾರ ನಡೆದ ಈ ಘಟನೆ ಕೆಲವು ಅನುಮಾನಗಳನ್ನು ಹುಟ್ಟುಹಾಕಿದ್ದು, ಇದೊಂದು ‘ನಕಲಿ ಎನ್ಕೌಂಟರ್‘ ಎಂದು ಕಾಂಗ್ರೆಸ್ ಆರೋಪಿಸಿದೆ. ಪಿಣರಾಯಿ ವಿಜಯನ್ ಸರ್ಕಾರವು ಮಾವೋವಾದಿಗಳನ್ನು ಕೊಲ್ಲುತ್ತಿದೆ ಎಂದು ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>