<p><strong>ನವದೆಹಲಿ:</strong>ಮಹಾರಾಷ್ಟ್ರದಲ್ಲಿ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿಯನ್ನು ಫೆಬ್ರುವರಿ 5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>‘ಈ ರೀತಿಯ ಪ್ರಕರಣಗಳನ್ನು ನೇರ ವಿಚಾರಣೆ ಪ್ರಾರಂಭವಾದ ಬಳಿಕ ಆಲಿಸುವುದು ಉತ್ತಮ’ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿತ್ತು.</p>.<p>ಆದರೆ ಸದ್ಯ ಸುಪ್ರೀಂಕೋರ್ಟ್, ಕೊರೊನಾ ಪಿಡುಗಿನಿಂದಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ವಿಚಾರಣೆಯನ್ನು ನಡೆಸುತ್ತಿದೆ.</p>.<p>ಈ ಅರ್ಜಿ ಸಂಬಂಧ ವಿಚಾರಣೆಯನ್ನು ಮಾರ್ಚ್ನಲ್ಲಿ ನಡೆಸುವಂತೆ ಮಹಾರಾಷ್ಟ್ರ ಸರ್ಕಾರವು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ಐದು ಸದಸ್ಯರ ವಿಸ್ತ್ರೃತ ಪೀಠಕ್ಕೆ ಮನವಿ ಮಾಡಿದೆ.</p>.<p>‘ಈ ರೀತಿಯ ಅರ್ಜಿಯನ್ನು ನೇರವಾಗಿ ವಿಚಾರಣೆ ನಡೆಸುವುದು ಉತ್ತಮವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವುದು ಅಪಾಯಕರ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡುವಂತೆ’ ಮಹಾರಾಷ್ಟ್ರ ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ಅವರು ಮನವಿ ಮಾಡಿದ್ದಾರೆ.</p>.<p>‘ದೇಶದಲ್ಲಿ ಈಗಾಗಲೇ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರಿಗೆ ಲಸಿಕೆ ನೀಡಲು ಆರರಿಂದ 8 ವಾರಗಳು ತೆಗೆದುಕೊಳ್ಳಬಹುದು. ಹಾಗಾಗಿ ಈ ಅರ್ಜಿ ವಿಚಾರಣೆಯನ್ನು ಮಾರ್ಚ್ ತಿಂಗಳಿಗೆ ಮುಂದೂಡಬೇಕು’ ಎಂದು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ಪೀಠವು, ಅರ್ಜಿಯ ವಿಚಾರಣೆ ಯಾವಾಗ ನಡೆಸಬೇಕು ಎಂಬುದರ ಬಗ್ಗೆ ಎರಡು ವಾರಗಳ ಬಳಿಕ ತಿಳಿಸುವುದಾಗಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ಮಹಾರಾಷ್ಟ್ರದಲ್ಲಿ ಶಿಕ್ಷಣ ಮತ್ತು ಉದ್ಯೋಗಗಳಲ್ಲಿ ಮರಾಠರಿಗೆ ಮೀಸಲಾತಿ ನೀಡುವ 2018ರ ಕಾನೂನಿಗೆ ಸಂಬಂಧಿಸಿದ ಅರ್ಜಿ ವಿಚಾರಣೆಯ ವೇಳಾಪಟ್ಟಿಯನ್ನು ಫೆಬ್ರುವರಿ 5 ರಂದು ತೀರ್ಮಾನಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.</p>.<p>‘ಈ ರೀತಿಯ ಪ್ರಕರಣಗಳನ್ನು ನೇರ ವಿಚಾರಣೆ ಪ್ರಾರಂಭವಾದ ಬಳಿಕ ಆಲಿಸುವುದು ಉತ್ತಮ’ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿತ್ತು.</p>.<p>ಆದರೆ ಸದ್ಯ ಸುಪ್ರೀಂಕೋರ್ಟ್, ಕೊರೊನಾ ಪಿಡುಗಿನಿಂದಾಗಿ ವಿಡಿಯೊ ಕಾನ್ಫರೆನ್ಸ್ ಮೂಲಕ ವರ್ಚುವಲ್ ವಿಚಾರಣೆಯನ್ನು ನಡೆಸುತ್ತಿದೆ.</p>.<p>ಈ ಅರ್ಜಿ ಸಂಬಂಧ ವಿಚಾರಣೆಯನ್ನು ಮಾರ್ಚ್ನಲ್ಲಿ ನಡೆಸುವಂತೆ ಮಹಾರಾಷ್ಟ್ರ ಸರ್ಕಾರವು ನ್ಯಾಯಮೂರ್ತಿ ಅಶೋಕ್ ಭೂಷಣ್ ಅವರ ನೇತೃತ್ವದ ಐದು ಸದಸ್ಯರ ವಿಸ್ತ್ರೃತ ಪೀಠಕ್ಕೆ ಮನವಿ ಮಾಡಿದೆ.</p>.<p>‘ಈ ರೀತಿಯ ಅರ್ಜಿಯನ್ನು ನೇರವಾಗಿ ವಿಚಾರಣೆ ನಡೆಸುವುದು ಉತ್ತಮವಾಗಿರುತ್ತದೆ. ಆದರೆ ಈ ಸಂದರ್ಭದಲ್ಲಿ ನ್ಯಾಯಾಲಯಕ್ಕೆ ಹಾಜರಾಗುವುದು ಅಪಾಯಕರ. ಹಾಗಾಗಿ ಅರ್ಜಿ ವಿಚಾರಣೆಯನ್ನು ಮುಂದೂಡುವಂತೆ’ ಮಹಾರಾಷ್ಟ್ರ ಸರ್ಕಾರದ ಪರ ವಕೀಲ ಮುಕುಲ್ ರೋಹಟಗಿ ಅವರು ಮನವಿ ಮಾಡಿದ್ದಾರೆ.</p>.<p>‘ದೇಶದಲ್ಲಿ ಈಗಾಗಲೇ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದೆ. 60 ವರ್ಷ ಮೇಲ್ಪಟ್ಟ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರಿಗೆ ಲಸಿಕೆ ನೀಡಲು ಆರರಿಂದ 8 ವಾರಗಳು ತೆಗೆದುಕೊಳ್ಳಬಹುದು. ಹಾಗಾಗಿ ಈ ಅರ್ಜಿ ವಿಚಾರಣೆಯನ್ನು ಮಾರ್ಚ್ ತಿಂಗಳಿಗೆ ಮುಂದೂಡಬೇಕು’ ಎಂದು ಮಹಾರಾಷ್ಟ್ರ ಸರ್ಕಾರ ಮನವಿ ಮಾಡಿದೆ.</p>.<p>ಈ ಬಗ್ಗೆ ವಿಚಾರಣೆ ನಡೆಸಿದ ಪೀಠವು, ಅರ್ಜಿಯ ವಿಚಾರಣೆ ಯಾವಾಗ ನಡೆಸಬೇಕು ಎಂಬುದರ ಬಗ್ಗೆ ಎರಡು ವಾರಗಳ ಬಳಿಕ ತಿಳಿಸುವುದಾಗಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>