‘ಸತ್ಯೇಂದರ್ಗೆ ಮಸಾಜ್ ಮಾಡಿದ್ದು ಫಿಸಿಯೋಥೆರಪಿಸ್ಟ್ ಅಲ್ಲ’

ನವದೆಹಲಿ: ಹಣ ಅಕ್ರಮ ವರ್ಗಾವಣೆ ಸಂಬಂಧ ಜೈಲಿನಲ್ಲಿರುವ ದೆಹಲಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ಮಸಾಜ್ ಮಾಡಿದ್ದು ಫಿಸಿಯೋಥೆರಪಿಸ್ಟ್ ಅಲ್ಲ, ಆತ ಅತ್ಯಾಚಾರ ಪ್ರಕರಣ ಸಂಬಂಧ ತಿಹಾರ್ ಜೈಲಿನಲ್ಲಿರುವ ಕೈದಿ ಎಂದು ಮೂಲಗಳು ಮಂಗಳವಾರ ತಿಳಿಸಿವೆ.
ಕಳೆದ ಐದು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿರುವ ಸತ್ಯೇಂದರ್ ಅವರು ಜೈಲಿನಲ್ಲಿ ಮಸಾಜ್ ಮಾಡಿಸಿಕೊಂಡಿದ್ದ ವಿಡಿಯೊ ಕುರಿತು ಪ್ರತಿಕ್ರಿಯಿಸಿದ್ದ ಎಎಪಿ, ‘ಸತ್ಯೇಂದರ್ ಅವರು ಜೈಲಿನಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು’ ಎಂದು ಪ್ರತಿಪಾದಿಸಿತ್ತು. ಎಎಪಿಯ ಹೇಳಿಕೆಯ ಬೆನ್ನಲ್ಲೇ ಈ ಮಾಹಿತಿ ಹೊರಬಿದ್ದಿದೆ.
ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ‘ಸತ್ಯೇಂದರ್ ಅವರು ತಮ್ಮ ಬೆನ್ನು ಮೂಳೆಯ ಚಿಕಿತ್ಸೆಗಾಗಿ ಫಿಸಿಯೋಥೆರಪಿ ಚಿಕಿತ್ಸೆ ಪಡೆದಿದ್ದರು. ಆದರೆ ಬಿಜೆಪಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸೋರಿಕೆ ಮಾಡುವ ಮೂಲಕ ನೀಚ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದ್ದರು. ಆದರೆ ಈಗ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸತ್ಯೇಂದರ್ ಅವರಿಗೆ ಮಸಾಜ್ ಮಾಡಿದ್ದು ರಿಂಕು ಎಂಬ ಕೈದಿ.
‘ರಿಂಕು ಅತ್ಯಾಚಾರ ಹಾಗೂ ಪೋಕ್ಸೊ ಕಾಯ್ದೆಯಡಿ ಜೈಲಿನಲ್ಲಿದ್ದಾನೆ. ಈತ ಫಿಸಿಯೋಥೆರಪಿಸ್ಟ್ ಅಲ್ಲ’ ಎಂದೂ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.