ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ‘ಸತ್ಯೇಂದರ್ ಅವರು ತಮ್ಮ ಬೆನ್ನು ಮೂಳೆಯ ಚಿಕಿತ್ಸೆಗಾಗಿ ಫಿಸಿಯೋಥೆರಪಿ ಚಿಕಿತ್ಸೆ ಪಡೆದಿದ್ದರು. ಆದರೆ ಬಿಜೆಪಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಸೋರಿಕೆ ಮಾಡುವ ಮೂಲಕ ನೀಚ ರಾಜಕಾರಣ ಮಾಡುತ್ತಿದೆ’ ಎಂದು ಆರೋಪಿಸಿದ್ದರು. ಆದರೆ ಈಗ ಮೂಲಗಳಿಂದ ಲಭ್ಯವಾಗಿರುವ ಮಾಹಿತಿ ಪ್ರಕಾರ, ಸತ್ಯೇಂದರ್ ಅವರಿಗೆ ಮಸಾಜ್ ಮಾಡಿದ್ದು ರಿಂಕು ಎಂಬ ಕೈದಿ.