<p><strong>ಪುಣೆ:</strong> ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ.</p>.<p>ಪಿರಂಗುಟ್ ಗ್ರಾಮದಲ್ಲಿರುವ ‘ಎಸ್ವಿಎಸ್ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ ಡಾ.ರಾಜೇಶ್ ದೇಶಮುಖ್, ಪುಣೆ ಗ್ರಾಮಾಂತರ ಎಸ್ಪಿ ಡಾ. ಅಭಿನವ್ ದೇಶಮುಖ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಧಾವಿಸಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹ 2 ಲಕ್ಷ, ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದೆ.</p>.<p><strong>ಓದಿ:</strong><a href="https://www.prajavani.net/business/commerce-news/after-petrol-diesel-nears-mark-in-rajasthan-india-836851.html" itemprop="url">₹100ರ ಸನಿಹ ಬಂದ ಡೀಸೆಲ್ ಬೆಲೆ</a></p>.<p>ಮಹಾರಾಷ್ಟ್ರ ಕೈಗಾರಿಕಾಭಿವೃದ್ಧಿ ನಿಗಮ ಮತ್ತು ಪುಣೆ ಮೆಟ್ರೊಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸಿದ್ದಾರೆ.</p>.<p>ಮೃತದೇಹಗಳನ್ನು ಪುಣೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.</p>.<p>ಕಾರ್ಖಾನೆಯಲ್ಲಿ ಒಟ್ಟು 37 ಮಂದಿ ಕಾರ್ಯನಿರ್ವಹಿಸುತ್ತಿದ್ದರು. 18 ಮಂದಿ ಮೃತಪಟ್ಟಿದ್ದು, ಉಳಿದವರನ್ನು ರಕ್ಷಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪುಣೆ:</strong> ಇಲ್ಲಿನ ಮುಲ್ಶಿ ಕೈಗಾರಿಕಾ ಪ್ರದೇಶದ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಢದಲ್ಲಿ 15 ಮಂದಿ ಮಹಿಳೆಯರು ಸೇರಿ 18 ಜನರು ಮೃತಪಟ್ಟಿದ್ದಾರೆ.</p>.<p>ಪಿರಂಗುಟ್ ಗ್ರಾಮದಲ್ಲಿರುವ ‘ಎಸ್ವಿಎಸ್ ಅಕ್ವಾ ಟೆಕ್ನಾಲಜೀಸ್’ ಕಾರ್ಖಾನೆಯಲ್ಲಿ ದುರಂತ ಸಂಭವಿಸಿದೆ. ಸುಮಾರು 20 ಮಂದಿ ಪಾರಾಗಿದ್ದಾರೆ. ಬೆಂಕಿಯಿಂದ ತೀವ್ರವಾಗಿ ಸುಟ್ಟಿದ್ದ ಶವಗಳನ್ನು ಹೊರತೆಗೆಯಲಾಗಿದೆ. ಈ ಕುರಿತು ತನಿಖೆಗೆ ಆದೇಶಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಬೆಂಕಿಯಿಂದಾಗಿ ವಾತಾವರಣವನ್ನು ದಟ್ಟ ಹೊಗೆ ಆವರಿಸಿತ್ತು. ಸ್ಥಳಕ್ಕೆ ಪುಣೆ ಜಿಲ್ಲಾಧಿಕಾರಿ ಡಾ.ರಾಜೇಶ್ ದೇಶಮುಖ್, ಪುಣೆ ಗ್ರಾಮಾಂತರ ಎಸ್ಪಿ ಡಾ. ಅಭಿನವ್ ದೇಶಮುಖ್ ಮತ್ತು ಇತರೆ ಹಿರಿಯ ಅಧಿಕಾರಿಗಳು ಧಾವಿಸಿದ್ದರು.</p>.<p>ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ ₹ 2 ಲಕ್ಷ, ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದೆ.</p>.<p><strong>ಓದಿ:</strong><a href="https://www.prajavani.net/business/commerce-news/after-petrol-diesel-nears-mark-in-rajasthan-india-836851.html" itemprop="url">₹100ರ ಸನಿಹ ಬಂದ ಡೀಸೆಲ್ ಬೆಲೆ</a></p>.<p>ಮಹಾರಾಷ್ಟ್ರ ಕೈಗಾರಿಕಾಭಿವೃದ್ಧಿ ನಿಗಮ ಮತ್ತು ಪುಣೆ ಮೆಟ್ರೊಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳೂ ಸ್ಥಳಕ್ಕೆ ಧಾವಿಸಿದ್ದಾರೆ.</p>.<p>ಮೃತದೇಹಗಳನ್ನು ಪುಣೆಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.</p>.<p>ಕಾರ್ಖಾನೆಯಲ್ಲಿ ಒಟ್ಟು 37 ಮಂದಿ ಕಾರ್ಯನಿರ್ವಹಿಸುತ್ತಿದ್ದರು. 18 ಮಂದಿ ಮೃತಪಟ್ಟಿದ್ದು, ಉಳಿದವರನ್ನು ರಕ್ಷಣೆ ಮಾಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>