ನವದೆಹಲಿ: ಕೇಂದ್ರ ದೆಹಲಿಯ ಝಂಡೇವಾಲನ್ ಸೈಕಲ್ ಮಾರುಕಟ್ಟೆಯ ಗೋದಾಮಿನಲ್ಲಿ ಶುಕ್ರವಾರ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಧ್ಯಾಹ್ನ 2.05ರ ವೇಳೆಗೆ ಗೋದಾಮಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಗ್ನಿಶಾಮಕ ದಳದ 27 ವಾಹನಗಳು ಸ್ಥಳಕ್ಕೆ ದೌಡಾಯಿಸಿವೆ. ಬೆಂಕಿಯನ್ನು ನಂದಿಸುವ ಪ್ರಯತ್ನ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಾವು–ನೋವು ಸಂಭವಿಸಿದ ಬಗ್ಗೆ ಈವರೆಗೆ ವರದಿಯಾಗಿಲ್ಲ.
ಈಶಾನ್ಯ ದೆಹಲಿಯ ಮುಸ್ತಫಾಬಾದ್ ಪ್ರದೇಶದಲ್ಲಿ ಗುರುವಾರ ಸಂಭವಿಸಿದ್ದ ಅಗ್ನಿ ಅವಘಡದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು 6 ಮಂದಿ ಗಾಯಗೊಂಡಿದ್ದರು. ಮೇ 13ರಂದು ಪಶ್ಚಿಮ ದೆಹಲಿಯ ಮುಂಡ್ಕಾ ಮೆಟ್ರೊ ನಿಲ್ದಾಣ ಸಮೀಪದ ನಾಲ್ಕು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 27 ಮಂದಿ ಮೃತಪಟ್ಟಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.