ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಜಿಯಾಬಾದ್‌ನಲ್ಲಿ ಬೆಂಕಿ ಅವಘಡ: ಸುಟ್ಟುಕರಕಲಾದ 20 ಹಸುಗಳು

Last Updated 11 ಏಪ್ರಿಲ್ 2022, 13:15 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್‌ನ ಕಿನೌನಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಸುಮಾರು 20 ಹಸುಗಳು ಸುಟ್ಟುಕರಕಲಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗಾಜಿಯಾಬಾದ್ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸಿಂಗ್, ಪ್ರಾಥಮಿಕ ಮಾಹಿತಿ ಪ್ರಕಾರ 15 ರಿಂದ 20 ಹಸುಗಳು ಸಜೀವ ದಹನವಾಗಿರುವ ಕುರಿತು ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ.

ಘಟನೆಯಲ್ಲಿ ಎಷ್ಟು ಹಸುಗಳು ಸಾವಿಗೀಡಾಗಿವೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಘಟನೆ ವೇಳೆ ಸ್ಥಳದಲ್ಲಿ ಹಾಜರಿದ್ದ ಹಲವರು 50ಕ್ಕೂ ಅಧಿಕ ಹಸುಗಳು ಸುಟ್ಟುಕರಲಾಗಿವೆ ಎಂದು ತಿಳಿಸಿದ್ದಾರೆ.

ಈ ಸಂಬಂಧ ತನಿಖೆ ಕೈಗೊಂಡಿದ್ದು, ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT