ಮಹಾತ್ಮ ಗಾಂಧೀಜಿ ಉದ್ಯೋಗ ಖಾತರಿ ಯೋಜನೆ (ಎಂನರೇಗಾ) ಅಡಿಯಲ್ಲಿ ದಿನಗೂಲಿಯನ್ನು ಕನಿಷ್ಠ ₹700ಕ್ಕೆ ಏರಿಕೆ ಮಾಡಬೇಕು ಮತ್ತು 5 ಮಾರ್ಲಾ ಯೋಜನೆ ಜಾರಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಗ್ರಾಮೀಣ ಸಹಕಾರ ಸಮಾಜಗಳಲ್ಲಿ ದಲಿತ ಸಮುದಾಯಕ್ಕೆ ಶೇಕಡ 33ರಷ್ಟು ಪ್ರಾತಿನಿಧ್ಯ ನೀಡಬೇಕು, ಭೂಸ್ವಾಧೀನ ಪರಿಹಾರ ಪ್ರಮಾಣವನ್ನು ಹೆಚ್ಚಿಸಬೇಕು, ಬೆಳೆಹಾನಿ ಹಾಗೂ ಚರ್ಮಗಂಟು ರೋಗಕ್ಕೆ ತುತ್ತಾಗಿ ಹಸುಗಳು ಮೃತಪಡುತ್ತಿರುವುದರಿಂದ ಸಂಕಷ್ಟಕ್ಕೊಳಗಾದ ರೈತರಿಗೆ ಪರಿಹಾರ ಹಣ ವಿತರಿಸಬೇಕು ಎಂಬ ಬೇಡಿಕೆಯನ್ನೂ ಇಟ್ಟಿದ್ದಾರೆ.